AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Karavali movie: ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ ‘ಕರಾವಳಿ’ ಸಿನಿಮಾ ಸಹ ರಿಲೀಸ್ ಆಗಲಿದೆ

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Karavali Movie
ಮಂಜುನಾಥ ಸಿ.
|

Updated on: Jun 19, 2026 | 6:23 PM

Share

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಪ್ರತಿಭಾವಂತ ನಟರು ನಟಿಸಿ, ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ ‘ಕರಾವಳಿ’ ಸಿನಿಮಾ ಸಹ ರಿಲೀಸ್ ಆಗಲಿದೆ.

‘ಕರಾವಳಿ’ ಸಿನಿಮಾವು ಇದೇ ಜುಲೈ 24ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಲಿದೆ. ಹೆಸರೇ ಸೂಚಿಸುತ್ತಿರುವಂತೆ ಇದು ಕರಾವಳಿ ಭಾಗದ ಕತೆಯನ್ನು ಒಳಗೊಂಡಿದೆ. ಕರಾವಳಿಯ ಕಂಬಳ, ದೈವ ಇನ್ನೂ ಹಲವು ವಿಷಯಗಳನ್ನು ಸಿನಿಮಾ ಒಳಗೊಂಡಿರಲಿದೆ. ಸಿನಿಮಾದ ಪೋಸ್ಟರ್​​ಗಳು, ಟೀಸರ್​​ಗಳು ಈಗಾಗಲೇ ಬಹಳ ಗಮನ ಸೆಳೆದಿವೆ. ಇದೀಗ ಸಿನಿಮಾದ ಬಿಡುಗಡೆಯನ್ನು ಘೋಷಣೆ ಮಾಡುವ ಪ್ರೇಕ್ಷಕರನ್ನು ಒಂದೊಳ್ಳೆ ಸಿನಿಮಾ ಅನುಭೂತಿಗೆ ಚಿತ್ರತಂಡ ಅಣಿಗೊಳಿಸಿದೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ನಟನೆಯ ‘ಕರಾವಳಿ’ ಸಿನಿಮಾಗೆ ಶೂಟಿಂಗ್ ಪೂರ್ಣ

‘ಕರಾವಳಿ’ ಸಿನಿಮಾನಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ ಜೊತೆಗೆ ರಮೇಶ್ ಇಂದಿರಾ, ಮಿತ್ರ ಅವರುಗಳು ಸಹ ಪ್ರಮುಖವಾದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಈ ಸಿನಿಮಾನಲ್ಲಿ ಮಾವೀರ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಸಣ್ಣ ಟೀಸರ್​​ನಲ್ಲಿ ಸಿನಿಮಾದ ಮೂಡ್​ ಬಗ್ಗೆ ಸಣ್ಣ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದ್ದು, ಈ ಸಿನಿಮಾ ಆಕ್ಷನ್, ಸಸ್ಪೆನ್ಸ್ ಜೊತೆಗೆ ದ್ವೇಷ, ಅಸೂಯೆ, ಸೇಡಿನ ಕತೆಯನ್ನೂ ಒಳಗೊಂಡಿರಲಿದೆ.

‘ಕರಾವಳಿ’ ಸಿನಿಮಾವನ್ನು ಗುರುದತ್ ಗಾಣಿಗಾ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. 2024 ಕ್ಕೆ ಸಿನಿಮಾದ ಮುಹೂರ್ತ ನೆರವೇರಿತ್ತು. ಸಿನಿಮಾ ಪ್ರಾರಂಭವಾದಾಗ ಇದು ಮನುಷ್ಯ ಮತ್ತು ಪ್ರಾಣಿಯ ನಡುವಿನ ಸಂಘರ್ಷದ ಕತೆ ಎನ್ನಲಾಗಿತ್ತು. ಇದೀಗ ಕೊನೆಗೂ ಎರಡು ವರ್ಷಗಳ ಬಳಿಕ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಚಿತ್ರತಂಡವು ಬಿಡುಗಡೆ ದಿನಾಂಕ ಘೋಷಿಸಿದೆ. ಸಿನಿಮಾ ಜುಲೈ 24ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?