Prajwal Revanna case: ಪ್ರಜ್ವಲ್ ದುಬೈಯಿಂದ ಬೆಂಗಳೂರುಗೆ ಬರುವ ಮಾಹಿತಿ, ವಿಮಾನ ನಿಲ್ದಾಣದಲ್ಲೇ ಬಂಧನ ಸಾಧ್ಯತೆ!

ಆದರೆ ಇದುವರೆಗೆ ಅವರು ಬಂದಿಲ್ಲ ಮತ್ತು ಈಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರ ಬಂಧಿಸಲಿದ್ದಾರೆ ಎಂಬ ಮಾಹಿತಿ ಸಹ ಇದೆ. ಏತನ್ಮಧ್ಯೆ, ಇದೇ ಪ್ರಕರಣ ಮತ್ತು ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ತಂದೆ ಮತ್ತು ಶಾಸಕ ಹೆಚ್ ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Prajwal Revanna case: ಪ್ರಜ್ವಲ್ ದುಬೈಯಿಂದ ಬೆಂಗಳೂರುಗೆ ಬರುವ ಮಾಹಿತಿ, ವಿಮಾನ ನಿಲ್ದಾಣದಲ್ಲೇ ಬಂಧನ ಸಾಧ್ಯತೆ!
|

Updated on: May 06, 2024 | 11:17 AM

ಬೆಂಗಳೂರು: ನಿನ್ನೆಯಿಂದ ಈ ವದಂತಿ ಕೇವಲ ಕರ್ನಾಟಕ ಮಾತ್ರವಲ್ಲ, ದೇಸ ದೆಲ್ಲೆಡೆ ಹರಡಿದೆ. ಲೈಂಗಿಕ ಅತ್ಯಾಚಾರದ ಟೇಪುಗಳು ಬಿಡುಗಡೆಯಾದ ಬಳಿಕ ಪ್ರಜ್ವಲ್ ರೇವಣ್ಣ (Prajwal Revanna) ವಿದೇಶಕ್ಕೆ ಪರಾರಿಯಾಗಿದ್ದು ಹಳೆಯ ಸುದ್ದಿ, ಆದರೆ ಈಗ ಅವರು ಸ್ವದೇಶಕ್ಕೆ ಮರಳಲಿದ್ದಾರೆ ಅಂತ ಸುದ್ದಿ ಬಂದಿದೆ. ಹಾಗೆ ನೋಡಿದರೆ, ನಿನ್ನೆಯೇ ಅವರು ಬರುತ್ತಾರೆ ಅಂತ ಗೊತ್ತಾಗಿತ್ತು. ಪ್ರಜ್ವಲ್ ಜರ್ಮನಿಯಿಂದ (Germany) ದುಬೈಗೆ ಬಂದಿದ್ದಾರೆ ಮತ್ತು ಅಲ್ಲಿಂದ ಭಾರತಕ್ಕೆ ಬರಲಿದ್ದಾರೆ ಮತ್ತು ಬೆಂಗಳೂರು ಬದಲು ಮಂಗಳೂರಲ್ಲಿ (Mangaluru) ರವಿವಾರ ತಡರಾತ್ರಿ ಇಲ್ಲವೇ ಸೋಮವಾರ ಬೆಳಗಿನ ಜಾವ ಲ್ಯಾಂಡ್ ಆಗಲಿದ್ದಾರೆ ಅಂತಲೂ ಹೇಳಲಾಗಿತ್ತು. ಆದರೆ ಇದುವರೆಗೆ ಅವರು ಬಂದಿಲ್ಲ ಮತ್ತು ಈಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರ ಬಂಧಿಸಲಿದ್ದಾರೆ ಎಂಬ ಮಾಹಿತಿ ಸಹ ಇದೆ. ಏತನ್ಮಧ್ಯೆ, ಇದೇ ಪ್ರಕರಣ ಮತ್ತು ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ತಂದೆ ಮತ್ತು ಶಾಸಕ ಹೆಚ್ ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ