ಪ್ರಜ್ವಲ್ ಪ್ರಕರಣ: ಸಂತ್ರಸ್ತೆ ರಕ್ಷಣೆಯಾದ ಮೈಸೂರಿನ ತೋಟದ ಮನೆಯ ನೆರೆಯವರು ಹೇಳೋದೇನು?

HD Revanna PA Rajagopal's farmhouse: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆಯೊಬ್ಬರನ್ನು ಎಸ್​ಐಟಿ ಪೊಲೀಸರು ರಕ್ಷಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಎಚ್.ಡಿ. ರೇವಣ್ಣ ಅವರ ಪಿಎ ರಾಜಗೋಪಾಲ್ ಎಂಬುವವರ ಕೆ ಆರ್ ನಗರ ತೋಟದ ಮನೆಯಲ್ಲಿ ಸಂತ್ರಸ್ತೆ ಇದ್ದರೆನ್ನಲಾಗಿದೆ. ಈ ಫಾರ್ಮ್​ಹೌಸ್​ನ ಪಕ್ಕದ ನಿವಾಸಿಯಾದ ನಟೇಶ್ ಎಂಬುವವರು ಟಿವಿ9 ಜೊತೆ ಮಾತನಾಡಿ ಸಂತ್ರಸ್ತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಪ್ರಜ್ವಲ್ ಪ್ರಕರಣ: ಸಂತ್ರಸ್ತೆ ರಕ್ಷಣೆಯಾದ ಮೈಸೂರಿನ ತೋಟದ ಮನೆಯ ನೆರೆಯವರು ಹೇಳೋದೇನು?
|

Updated on: May 05, 2024 | 1:56 PM

ಮೈಸೂರು, ಮೇ 5: ಪ್ರಜ್ವಲ್ ರೇವಣ್ಣ ವಿರುದ್ಧದ ರಾಸಲೀಲೆ ಪ್ರಕರಣದಲ್ಲಿ (Prajwal Revanna sex scandal) ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯೊಬ್ಬಳನ್ನು (victim woman) ಎಸ್​ಐಟಿ ಪೊಲೀಸರು ರಕ್ಷಿಸಿದ್ದಾರೆ. ಎಚ್.ಡಿ. ರೇವಣ್ಣ ಅವರ ಆಪ್ತ ಸಹಾಯಕ ರಾಜಗೋಪಾಲ್ (Rajagopal) ಅವರಿಗೆ ಸೇರಿದ ಫಾರ್ಮ್ ಹೌಸ್​ನಲ್ಲಿದ್ದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಈ ತೋಟದ ಮನೆಯ ಅಕ್ಕಪಕ್ಕದ ನಿವಾಸಿಗಳು ಸಂತ್ರಸ್ತೆಯನ್ನು ಕಂಡಿದ್ದಾರೆ. ನಟೇಶ್ ಎಂಬ ವ್ಯಕ್ತಿ ಟಿವಿ9 ಜೊತೆ ಮಾತನಾಡಿ, ತಾನು ಸಂತ್ರಸ್ತೆ ಜೊತೆ ಮಾತನಾಡಿಯೂ ಇದ್ದೇನೆ ಎಂದಿದ್ದಾರೆ. ಆ ಮಹಿಳೆ ತಾನು ಎಚ್.ಡಿ. ಕೋಟೆಯವ್ರು ಅಂತ ಹೇಳಿಕೊಂಡ್ರು. ಯಜಮಾನ್ರು ತೋಟದಲ್ಲವ್ರೆ, ಅವ್ರಿಗೆ ದುಡ್ಡು ಕೊಡೋಕೆ ಬಂದಿದೀನಿ ಅಂತ ಅಂತ ಅಂದ್ರು. ಆವಕ್ಕನ ಜೊತೆ ಎರಡು ದಿನ ಮಾತನಾಡಿಸಿದೀನಿ ಎಂದು ನಟೇಶ್ ಹೇಳಿದ್ದಾರೆ.

ಎಚ್.ಡಿ. ರೇವಣ್ಣ ಸೂಚನೆ ಮೇರೆಗೆ ರಾಜಗೋಪಾಲ್ ಈ ಮಹಿಳೆಯನ್ನು ಅಪಹರಿಸಿರಬಹುದು ಎಂಬ ಶಂಕೆ ಇದೆ. ಸಂತ್ರಸ್ತೆಯನ್ನು ಎಸ್​ಐಟಿ ಪೊಲೀಸರು ರಕ್ಷಣೆ ಮಾಡಿದಾಗಿನಿಂದ ರಾಜಗೋಪಾಲ್ ನಾಪತ್ತೆಯಾಗಿದ್ದಾರೆ. ಗ್ರಾಮಸ್ಥ ನಟೇಶ್ ಪ್ರಕಾರ ರಾಜಗೋಪಾಲ್ ಇಲ್ಲಿ ಬಡವರಿಗೆ ಬಹಳ ಸಹಾಯ ಮಾಡುತ್ತಾರಂತೆ. ಹಾಗೆಯೇ ರೇವಣ್ಣ ಈ ತೋಟದ ಮನೆಗೆ ಬಂದಿದ್ದನ್ನು ಒಮ್ಮೆಯೂ ನೋಡಿಲ್ಲ. ತೋಟದ ಮನೆಗೆ ಬಂದಿದ್ದ ಮಹಿಳೆ ಅತ್ಯಾಚಾರ ಸಂತ್ರಸ್ತೆ ಎಂದು ಗೊತ್ತಾಗಿದ್ದೇ ಈಗ ಎಂದು ಇವರು ಹೇಳುತ್ತಾರೆ.

ಇದನ್ನೂ ಓದಿ: ರೇವಣ್ಣ ಒಂಟಿ ಸಲಗ, ಎಲ್ಲಿ ಬಾಯಾರಿತೋ ಅಲ್ಲಿ ನೀರು ಕುಡಿಯೋ ಬಸವ ಇದ್ದಂಗೆ: ಗ್ರಾಮಸ್ಥನೊಬ್ಬನ ಅಭಿಮಾನದ ಮಾತು

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ