HD Kumaraswamy: ಹೆಚ್​ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

Updated on: May 07, 2024 | 11:43 AM

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಇದಕ್ಕೆ ಸಂಬಂಧಿಸಿದ ಇನ್ನೊಂದು ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಎಸ್​ಐಟಿ ವಶದಲ್ಲಿದ್ದಾರೆ. ಮತ್ತೊಂದೆಡೆ, ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ದಿನೇದಿನೆ ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ಲೀಕ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಈಗಾಗಲೇ ಆರೋಪ ಮಾಡಿದ್ದಾರೆ. ಈ ಮಧ್ಯೆ, ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮೇಲೆ ಕಾಂಗ್ರೆಸ್ ಆರೋಪ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ್ದ ದೇವರಾಜೇಗೌಡ, ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಇದೆ ಎಂದು ನೇರ ಆರೋಪ ಮಾಡಿದ್ದಾರೆ. ಜತೆಗೆ, ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್​ಐಟಿ ಸಹ ಡಿಕೆ ಶಿವಕುಮಾರ್ ನಿಯಂತ್ರಣದಲ್ಲಿದೆ ಎಂದು ಆರೋಪಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಮಂಗಳವಾರ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದೆ. ಪ್ರಸ್ತುತ ರಾಜಕೀಯ ಮತ್ತು ವಿಡಿಯೋ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರಸ್ತಾಪಿಸುತ್ತಿದ್ದಾರೆ. ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಈ ಮಧ್ಯೆ, ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಆರೋಪಿಸಿದ್ದಾರೆ. ಮತ್ತೊಂದೆಡೆ, ಪ್ರಜ್ವಲ್​​ ವಿಡಿಯೋ ಕೇಸ್​ನಲ್ಲಿ ಡಿಸಿಎಂ ಡಿಕೆ ಶಿಕುಮಾರ್ ಕೈವಾಡವಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಜೆಡಿಎಸ್​​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಜೆಡಿಎಸ್​ ಕಚೇರಿ ಆವರಣದಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಬಂಧಿಸುವಂತೆ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More