AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಂಕಿತ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದ ಜನತಾ ಪಕ್ಷ! ಮುಂದೇನಾಯ್ತು ನೋಡಿ

ಕಳಂಕಿತ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದ ಜನತಾ ಪಕ್ಷ! ಮುಂದೇನಾಯ್ತು ನೋಡಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 11, 2024 | 12:39 PM

Share

Prajwal Revanna Video Case: ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲನನ್ನು ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಏಪ್ರಿಲ್ ​26ರಂದು ಮುಗಿಯುತ್ತಿದ್ದಂತೆ ಅಶ್ಲೀಲ ವಿಡಿಯೋಗಳ (Prajwal Revanna Video Case) ಕಳಂಕಿತ ವ್ಯಕ್ತಿ (Prajwal Revanna) ವಿದೇಶಕ್ಕೆ ಪರಾರಿಯಾದರು. ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ! ಅದಾದ ನಂತರ ಪ್ರಕರಣದ ಬೆನ್ನುಹತ್ತಿದ ಎಸ್​ಐಟಿ ಪೊಲೀಸರಿಗೆ ಇದುವರೆಗೂ ಅವರನ್ನು ಪತ್ತೆ ಹಚ್ಚಿ, ಬಂಧಿಸಲು ಸಾಧ್ಯವಾಗಿಲ್ಲ. ಈ ಮಧ್ಯೆ, ಜನತಾ ಪಕ್ಷದ ವತಿಯಿಂದ ಆರೋಪಿಯ ಬಗ್ಗೆ ಪೋಸ್ಟರ್ ಹಚ್ಚುವ/ಹಂಚುವ ಕೆಲಸ ನಡೆದಿದೆ.

ಪ್ರಜ್ವಲ್ ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಪ್ರಕಟಿಸಿದೆ. ಬೆಂಗಳೂರಿನ ಶಿವಾನಂದ ಸರ್ಕಲ್​ನಲ್ಲಿ (Shivananda Circle, Bangalore) ಜನತಾ ಪಕ್ಷದ (Janata Party) ನಾಗೇಶ್ ಎಂಬಾತ ಪೋಸ್ಟರ್ (Poster) ಅಂಟಿಸಿ, ಮಾಧ್ಯಮಗಳ ಜೊತೆ ಮಾತನಾಡುತ್ತದ್ದಾಗಲೇ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ ಆದರೆ ಸಿಎಂ ಕುರ್ಚಿಗಾಗಿ ಶಿವಕುಮಾರ್ ದುಡುಕುವುದು ಬೇಡ: ವಿ ಸೋಮಣ್ಣ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು