ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ ವಾಗ್ದಾಳಿ

Updated on: Apr 01, 2025 | 1:16 PM

ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗಾರ್ಬೇಜ್ ಟ್ಯಾಕ್ಸ್ ಅಥವಾ ಕಸಕ್ಕೆ ತೆರಿಗೆ ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದು, ದಿವಾಳಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ‘ಕಸ’ವಾಗಿ ಪರಿಣಮಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಬಡವಾಗಿದೆ. ಕರ್ನಾಟಕದಲ್ಲಿ ಹಣದುಬ್ಬರ ಹೆಚ್ಚಾಗಿದೆ. ಅಧಿಕಾರಕ್ಕೆ ಬಂದಂದಿನಿಂದಲೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಾ ಬಂದ ಕಾಂಗ್ರೆಸ್ ಸರ್ಕಾರ ಈಗ ‘ಕಸ ತೆರಿಗೆ (ಗಾರ್ಬೇಜ್ ಟ್ಯಾಕ್ಸ್)’ ವಿಧಿಸುತ್ತಿದೆ. ಇದನ್ನು ಖಂಡಿಸುತ್ತೇನೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 01, 2025 01:16 PM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More