ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡ್ತಿಲ್ಲ ಎಂದಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 13: ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ಐದಾರು ವರ್ಷಗಳಿಂದ ಕೇಂದ್ರ ಸರ್ಕಾರ ಹುದ್ದೆ ಭರ್ತಿ ಮಾಡ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
