AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಅರೆದು ಹಾಲು ತೆಗೆದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಕಬ್ಬು ಅರೆದು ಹಾಲು ತೆಗೆದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಭೀಮೇಶ್​​ ಪೂಜಾರ್
| Edited By: |

Updated on: Jan 14, 2024 | 2:41 PM

Share

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇದೇ ಜನವರಿ‌ 12 ರಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದರು. ರಾಯಚೂರು-ಮಂತ್ರಾಲಯ ಮಾರ್ಗ ಮಧ್ಯೆ ಕಬ್ಬಿನ ಹಾಲಿನ ಅಂಗಡಿ ಬಳಿ ಕಾರು ನಿಲ್ಲಿಸಿದ್ದಾರೆ. ಬಳಿಕ ಅಂಗಡಿಯಲ್ಲಿ ಖುದ್ದು ತಾವೇ ಮಷಿನ್​ಗೆ ಕಬ್ಬು ಹಾಕಿ, ಹಾಲು ತೆಗೆದಿದ್ದಾರೆ.

ರಾಯಚೂರು, ಜನವರಿ 14: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಇದೇ ಜನವರಿ‌ 12 ರಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದರು. ರಾಯಚೂರು-ಮಂತ್ರಾಲಯ ಮಾರ್ಗ ಮಧ್ಯೆ ಕಬ್ಬಿನ ಹಾಲಿನ ಅಂಗಡಿ ಬಳಿ ಕಾರು ನಿಲ್ಲಿಸಿದ್ದಾರೆ. ಬಳಿಕ ಅಂಗಡಿಯಲ್ಲಿ ಖುದ್ದು ತಾವೇ ಮಷಿನ್​ಗೆ ಕಬ್ಬು ಹಾಕಿ, ಹಾಲು ತೆಗೆದಿದ್ದಾರೆ. ಪ್ರಹ್ಲಾದ್​ ಜೋಶಿ ಅವರು ಕಬ್ಬಿನಿಂದ ಹಾಲು ತೆಗೆಯುವ ಸನ್ನಿವೇಶ ಮೊಬೈಲ್​​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಅಲ್ಲದೇ ಖುದ್ದು ಪ್ರಹ್ಲಾದ್​ ಜೋಶಿ ಅವರೇ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್​​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ವಿದೇಶಿ ಪಾನೀಯಗಳ ಬದಲು ನಮ್ಮ ದೇಶದ ಸ್ವಾದ ಕಬ್ಬಿನ ಹಾಲು ಬಲು ಚಂದ” ಎಂದು ಕ್ಯಾಪ್ಶನ್​​ ಬೆರೆದಿದ್ದಾರೆ. ಇದಕ್ಕೆ ನೆಟ್ಟಿಗರು “ವಿದೇಶಿ ಪಾನೀಯಗಿಂತ ದೇಶಿ ಪಾನೀಯಕ್ಕೆ ಒತ್ತು ನೀಡಿ” ಅಂತ ಪ್ರಹ್ಲಾದ್​ ಜೋಶಿ ಅವರು ಸಂದೇಶ ಸಾರಿದ್ದಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More