ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ ಪ್ರಮೋದ್ ಮಧ್ವರಾಜ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2023 | 10:53 AM

ಟಿಕೆಟ್ ನೀಡಿದರೆ ಪ್ರಾಮಾಣಿಕವಾಗಿ ಕೆಲಸದ ಮಾಡುತ್ತೇನೆ, ನೀಡದಿದ್ದರೂ ಅದೇ ಪ್ರಾಮಾಣಿಕತೆ ತನ್ನ ಕೆಲಸದಲ್ಲಿರುತ್ತದೆ ಎಂದು ಪ್ರಮೋದ್ ಹೇಳುತ್ತಾರೆ.

ಉಡುಪಿ: ಸಿದ್ದರಾಮಯ್ಯ (Siddaramaiah) ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ (Pramod Madhwaraj) ಕೇವಲ ಒಂದು ವರ್ಷ ಹಿಂದೆಯಷ್ಟೇ ಕಾಂಗ್ರೆಸ್ ಸೇರಿ ಬಿಜೆಪಿ ಸೇರಿದ್ದರು. ಅವರರು ಹಿರಿಯ ಕಾಂಗ್ರೆಸ್ ನಾಯಕಿ ಮನೋರಮ ಮಧ್ವರಾಜ್ ಅವರ ಪುತ್ರ. ಇಂದು ಉಡುಪಿಯಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಮಾತಾಡಿದ 2024 ಲೋಕ ಸಭಾ ಚುನಾವಣೆಯಲ್ಲಿ ತಾನು ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಹೇಳಿದರು. ನಿಮಗೆ ಗೊತ್ತರುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಈ ಕ್ಷೇತ್ರವನ್ನು 2014 ರಿಂದ ಪ್ರತಿನಿಧಿಸುತ್ತಿದ್ದಾರೆ. 2024ರಲ್ಲೂ ಅವರನ್ನೇ ಪ್ರಬಲ ಅಭ್ಯರ್ಥಿಯೆಂದು ಬಿಜೆಪಿ ವರಿಷ್ಠರು ಪರಿಗಣಿಸೋದು ನಿಶ್ಚಿತ. ಈ ಹಿನ್ನೆಲೆಯಲ್ಲಿ ಪ್ರಮೋದ್ ಅವರ ಆಸೆ ಈಡೇರಬಹುದೇ ಅನ್ನೋದು ಕಾದು ನೋಡಬೇಕಿರುವ ಸಂಗತಿ. ಟಿಕೆಟ್ ನೀಡಿದರೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ, ನೀಡದಿದ್ದರೂ ಅದೇ ಪ್ರಾಮಾಣಿಕತೆ ತನ್ನ ಕೆಲಸದಲ್ಲಿರುತ್ತದೆ ಎಂದು ಪ್ರಮೋದ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 05, 2023 10:52 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.