ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಸರ್ಜನೆಗೆ ಮೊದಲು ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ

|

Updated on: Sep 21, 2023 | 1:09 PM

ಗಣೇಶ ಉತ್ಸವ ಆಚರಿಸಲು ಅಡಚಣೆ ಉಂಟುಮಾಡುವ ಪ್ರಯತ್ನ ಮತ್ತೊಮ್ಮೆ ಮಾಡಿದರೆ ಮಸೀದಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ವಿವಾದಾತ್ಮಕ ಹೇಳಿಕೆಯನ್ನು ಮುತಾಲಿಕ್ ನೀಡಿದರು. ಸೌಹಾರ್ದತೆಯ ಹಿನ್ನೆಲೆಯಲ್ಲಿ ಹಿಂದೂಗಳು ಇದುವರೆಗೆ ತಾಳ್ಮೆವಹಿಸಿಕೊಂಡು ಬಂದಿದ್ದಾರೆ, ಮುಸಲ್ಮಾನರು ಸಹ ಅದಕ್ಕಾಗಿ ಪ್ರಯತ್ನಿಸಬೇಕು, ಒಂದೇ ಕೈಯಿಂದ ಚಪ್ಪಾಳೆ ತಟ್ಟಲಾಗದು ಎಂದು ಮುತಾಲಿಕ್ ಹೇಳಿದರು.

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Eidgah Maidan) ಮೂರು ದಿನಗಳ ಹಿಂದೆ ಪ್ರತಿಷ್ಠಾಪಿಸಲಾಗಿದ್ದ ವಿಘ್ನ ವಿನಾಶಕ ಗಣೇಶನ ವಿಸರ್ಜನೆ ಇವತ್ತು ನಡೆಯಲಿದ್ದು ಭರ್ಜರಿ ತಯಾರಿಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅನುಮತಿ ನೀಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದ ಅಂಜುಮನ್ ಕಮಿಟಿ (Anjuman Committee) ವಿರುದ್ಧ ವಾಗ್ದಾಳಿ ನಡೆಸಿದರು. ಗಣೇಶ ಉತ್ಸವ ಆಚರಿಸಲು ಅಡಚಣೆ ಉಂಟುಮಾಡುವ ಪ್ರಯತ್ನ ಮತ್ತೊಮ್ಮೆ ಮಾಡಿದರೆ ಮಸೀದಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ವಿವಾದಾತ್ಮಕ ಹೇಳಿಕೆಯನ್ನು ಮುತಾಲಿಕ್ ನೀಡಿದರು. ಸೌಹಾರ್ದತೆಯ ಹಿನ್ನೆಲೆಯಲ್ಲಿ ಹಿಂದೂಗಳು ಇದುವರೆಗೆ ತಾಳ್ಮೆವಹಿಸಿಕೊಂಡು ಬಂದಿದ್ದಾರೆ, ಮುಸಲ್ಮಾನರು ಸಹ ಅದಕ್ಕಾಗಿ ಪ್ರಯತ್ನಿಸಬೇಕು, ಒಂದೇ ಕೈಯಿಂದ ಚಪ್ಪಾಳೆ ತಟ್ಟಲಾಗದು ಎಂದು ಮುತಾಲಿಕ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on