Pramod Muthalik: ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರಮೋದ್ ಮುತಾಲಿಕ್; ಕಾರಣವೇನು ಗೊತ್ತಾ? 

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2023 | 2:41 PM

ಕಾಂಗ್ರೆಸ್ ಸರ್ಕಾರ ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಸರ್ಕಾರ(Congress Government) ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು ‘ ದೇವಸ್ಥಾನದ ಪವಿತ್ರತೆ ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ಖಾಸಗಿ ದೇವಸ್ಥಾನಗಳಲ್ಲೂ ಕೂಡ ಮೊಬೈಲ್ ಬ್ಯಾನ್ ಮಾಡುವಂತೆ ವಿನಂತಿ ಮಾಡುತ್ತೇನೆ. ಜೊತೆಗೆ ಖಾಸಗಿ ದೇವಸ್ಥಾನದ ಆಡಳಿತ ಮಂಡಳಿಗೆ ನಮ್ಮೆಲ್ಲಾ ಕಾರ್ಯಕರ್ತರು ಮನವಿ ಕೊಡುತ್ತಾರೆಂದು ಹೇಳಿದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Sahadev Mane