AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ

ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ

ರಾಮ್​, ಮೈಸೂರು
| Edited By: |

Updated on: Jul 24, 2026 | 2:10 PM

Share

ನೀಟ್ ಪ್ರತಿಭಟನೆಗಳ ಹಿಂದೆ ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿ ಇದೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ಜೊತೆ ರಾಜ್ಯ ಮತ್ತು ದೆಹಲಿ ಕಾಂಗ್ರೆಸ್ ಸೇರಿಕೊಂಡಿದ್ದು, ಅಮೆರಿಕನ್ ಡೀಪ್ ಸ್ಟೇಟ್‌ನಿಂದ ಧನಸಹಾಯ ಪಡೆದು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಮೋದಿ ಸರ್ಕಾರವನ್ನು ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ ಎಂದು ಸಿಂಹ ಹೇಳಿದ್ದಾರೆ.

ಮೈಸೂರು, ಜುಲೈ 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಮತ್ತು ದೆಹಲಿಯ ಕಾಂಗ್ರೆಸ್‌ನೊಂದಿಗೆ ಸೇರಿಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶ ಪ್ರಕಟಗೊಂಡು ಹಲವು ದಿನಗಳ ನಂತರ ಪ್ರತಿಭಟನೆಗಳು ಆರಂಭವಾಗಿವೆ. ಇದು ಪೂರ್ವಯೋಜಿತ ಹುನ್ನಾರ ಎಂದು ಅಭಿಪ್ರಾಯಪಟ್ಟರು. ಹಿಂದೆ ಸಿಎಎ ಮತ್ತು ಕೃಷಿ ಮಸೂದೆಗಳ ವಿರುದ್ಧ ನಡೆದ ಪ್ರತಿಭಟನೆಗಳಂತೆಯೇ ಇದು ಮೋದಿ ಸರ್ಕಾರವನ್ನು ಅಲ್ಲಾಡಿಸುವ ಪ್ರಯತ್ನವಾಗಿದೆ.

ಇಂತಹ ಪ್ರಯತ್ನಗಳಿಗೆ ಅಮೆರಿಕನ್ ಡೀಪ್ ಸ್ಟೇಟ್ ನಿಂದ ಧನಸಹಾಯ ದೊರೆಯುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಬಾಂಗ್ಲಾದೇಶ, ಶ್ರೀಲಂಕಾ ಮತ್ತು ನೇಪಾಳದಲ್ಲಿ ಸರ್ಕಾರಗಳನ್ನು ಬದಲಾಯಿಸಲು ಇದೇ ರೀತಿಯ ತಂತ್ರಗಳನ್ನು ಬಳಸಲಾಗಿದೆ. ಈಗ ಭಾರತವನ್ನು ಗುರಿಯಾಗಿಸಿಕೊಂಡು ಮೋದಿ ಸರ್ಕಾರವನ್ನು ದುರ್ಬಲಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಹಿತಾಸಕ್ತಿಯನ್ನು ಕಾಪಾಡುವ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಇದು ನಡೆಯುತ್ತಿದೆ ಎಂದು ಸಿಂಹ ಪ್ರತಿಪಾದಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us