AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಮ್ಮೆ ಆ ಮಾತು ಬಂದರೆ ಠಾಣೆಗೆ ನುಗ್ಗುತ್ತೇನೆ: ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

“ಇನ್ನೊಮ್ಮೆ ಆ ಮಾತು ಬಂದರೆ ಠಾಣೆಗೆ ನುಗ್ಗುತ್ತೇನೆ”: ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ರಾಮ್​, ಮೈಸೂರು
| Edited By: |

Updated on: Sep 12, 2026 | 4:01 PM

Share

ಮೈಸೂರಿನಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಮಸೀದಿಗಳ ಬಳಿ ನಿರ್ಬಂಧಗಳನ್ನು ವಿಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿ, ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮೈಸೂರು, ಸೆ.12: ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಮಸೀದಿಗಳ ಮುಂದೆ ಮೆರವಣಿಗೆ ನಡೆಸದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ನೀಡಿರುವ ಎಚ್ಚರಿಕೆ ಮತ್ತು ನಿರ್ಬಂಧಗಳ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಮತ್ತು ಟಿ. ನರಸೀಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಧನಂಜಯ್ ಹೇಳಿದ್ದಾರೆ. ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು, ಗಲಭೆ ಸೃಷ್ಟಿಸುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಆದರೆ, ಇನ್ಸ್‌ಪೆಕ್ಟರ್ ಧನಂಜಯ್ ಅವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, “ಇನ್ನೊಂದು ಸಾರಿ ಅಂತಹ ಮಾತು ನಿಮ್ಮ ಬಾಯಿಂದ ಬಂದರೆ, ನಿಮ್ಮ ಠಾಣೆಗೆ ಬಂದು ನುಗ್ಗುತ್ತೇನೆ” ಎಂದು ಎಚ್ಚರಿಸಿದ್ದಾರೆ. ಅಸಹಾಯಕ ಯುವಕರ ಮೇಲೆ ಪೌರುಷ ತೋರಿಸುವ ಬದಲು, ತನ್ನೊಂದಿಗೆ ಪೌರುಷ ತೋರಿಸಿ ಎಂದು ಸವಾಲು ಹಾಕಿದ್ದಾರೆ. ಗಣೇಶೋತ್ಸವದ ಸಂದರ್ಭದಲ್ಲಿ ಮಾತ್ರ ಮಸೀದಿಗಳ ಮುಂದೆ ಪೊಲೀಸ್ ಭದ್ರತೆ ಇರುತ್ತದೆ, ಆದರೆ ಮೊಹರಂ ಅಥವಾ ಈದ್ ಮೆರವಣಿಗೆಗಳ ಸಂದರ್ಭದಲ್ಲಿ ದೇವಸ್ಥಾನಗಳ ಮುಂದೆ ಇದೇ ರೀತಿಯ ಭದ್ರತೆ ಇರುವುದಿಲ್ಲ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಈ ನಿರ್ಬಂಧಗಳು ಏಕಪಕ್ಷೀಯವಾಗಿವೆ ಎಂದು ಅವರು ಟೀಕಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us