ಸಂಪರ್ಕದಲ್ಲಿರುವ ಪ್ರತಾಪ್ ಸಿಂಹ ಸಂಪೂರ್ಣವಾಗಿ ಸಹಕರಿಸುವ ಭರವಸೆ ನೀಡಿದ್ದಾರೆ: ಯದುವೀರ್ ಕೃಷ್ಣದತ್ ಒಡೆಯರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2024 | 3:05 PM

ಕಳೆದ ಎರಡು ಅವಧಿಗಳಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ ಸಮಾಜದ ಎಲ್ಲ ವರ್ಗಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಉತ್ತಮ ತಳಹದಿಯನ್ನು ಹಾಕಿದ್ದಾರೆ, ಅವರು ಮಾಡಿರುವ ಎಲ್ಲ ಉತ್ತಮ ಕೆಲಸಗಳನ್ನು ತಾವು ಮುಂದುವರಿಸಿಕೊಂಡು ಹೋಗೋದಾಗಿ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ ಒಡೆಯರ್ (Yaduveer Krishna Dutt Wodeyar), ಕಳೆದ ಎರಡು ಅವಧಿಗಳಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ (Pratap Simha) ಅವರು ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ (massive contribution) ನೀಡಿ ಸಮಾಜದ ಎಲ್ಲ ವರ್ಗಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಉತ್ತಮ ತಳಹದಿಯನ್ನು ಹಾಕಿದ್ದಾರೆ, ಅವರು ಮಾಡಿರುವ ಎಲ್ಲ ಉತ್ತಮ ಕೆಲಸಗಳನ್ನು ತಾವು ಮುಂದುವರಿಸಿಕೊಂಡು ಹೋಗೋದಾಗಿ ಹೇಳಿದರು. ಅಧಿಕೃತವಾಗಿ ಪ್ರತಾಪ್ ಸಿಂಹ ಅವರು ಯದುವೀರ್ ಅವರಿಗೆ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಹೇಳಿದರೂ ಅವರು ಬೆಂಬಲಿಗರು ಅನ್ಯಮನಸ್ಕರಾಗಿದ್ದಾರೆ ಮತ್ತು ಬಹಿರಂಗವಾಗಿ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ, ಹಾಗಾಗಿ ತಮಗೆ ಸಮಸ್ಯೆ ಆಗಲಾರದದೆ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯದುವೀರ್, ಅಂಥದ್ದೇನೂ ಸಂಭವಿಸಲಾರದು, ಪ್ರತಾಪ್ ಸಿಂಹ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ, ಅವರು ಸಂಪೂರ್ಣ ಸಹಕಾರ ನೀಡೋದಾಗಿ ಹೇಳಿರುವುದರಿಂದ ಅವರ ಬೆಂಬಲಿಗರು ತಮಗೆ ಅಡ್ಡ್ಡಿಪಡಿಸಲಾರರು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿ:  ಕ್ಷೇತ್ರದಾಚೆಯ ಜನ ಸಹ ನನಗೆ ಟಿಕೆಟ್ ಸಿಗಲಿ ಅಂತ ಪ್ರಾರ್ಥಿಸುತ್ತಿದ್ದಾರೆ, ನನ್ನಂಥ ಭಾಗ್ಯಶಾಲಿ ಬೇರ‍್ಯಾರೂ ಇಲ್ಲ: ಪ್ರತಾಪ್ ಸಿಂಹ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.