AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹನೇನು ದೊಡ್ಡ ರಾಷ್ಟ್ರೀಯ ನಾಯಕನೇ ಸಿದ್ದರಾಮಯ್ಯ ಟಾರ್ಗೆಟ್ ಮಾಡಲು? ಯತೀಂದ್ರ ಸಿದ್ದರಾಮಯ್ಯ

ಪ್ರತಾಪ್ ಸಿಂಹನೇನು ದೊಡ್ಡ ರಾಷ್ಟ್ರೀಯ ನಾಯಕನೇ ಸಿದ್ದರಾಮಯ್ಯ ಟಾರ್ಗೆಟ್ ಮಾಡಲು? ಯತೀಂದ್ರ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jan 05, 2024 | 1:51 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹರನ್ನು ಟಾರ್ಗೆಟ್ ಮಾಡಿದರೆ ಅದು ಹೇಗೆ ತನಗೆ ರಾಜಕೀಯ ಲಾಭ ತಂದುಕೊಡುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಅಂತ ಕೇಳಿದಾಗ, ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧಿಸುವುದಾಗಿ ಅವರು ಹೇಳಿದರು.

ಮೈಸೂರು: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ಮತ್ತು ಆರೆಸ್ಸೆಸ್ ಭಾರತವನ್ನು ಹಿಂದೂ ರಾಷ್ಟ್ರ ಮಾಡಹೊರಟ್ಟಿದ್ದಾರೆಂದು ನೀಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕುಟುಂಬ ತನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಟಾರ್ಗೆಟ್ ಮಾಡೋದಿಕ್ಕೆ ಪ್ರತಾಪ್ ಸಿಂಹರೇನು ರಾಷ್ಟ್ರೀಯ ನಾಯಕರೇ? ತನ್ನ ತಂದೆ ಸಿದ್ದರಾಮಯ್ಯ ತಮ್ಮ 45 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ತಮಗೆ ಮೋಸ ಮಾಡಿದವರ ವಿರುದ್ಧವೂ ಸುಳ್ಳು ಆರೋಪ ಹೊರಿಸಿಲ್ಲ ಮತ್ತು ರಾಜಕೀಯ ಹಗೆ ಸಾಧಿಸಿಲ್ಲ. ಅಂಥದ್ದರಲ್ಲಿ ಪ್ರತಾಪ್ ಸಿಂಹರನ್ನು ಯಾಕೆ ಟಾರ್ಗೆಟ್ ಮಾಡುತ್ತಾರೆ?ಎಂದು ಹೇಳಿದರು. ಮೈಲೇಜ್ ಗಿಟ್ಟಿಸಿಕೊಳ್ಳಲು ಸಂಸದ ಹಾಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅವರ ಸಹೋದರ ತಪ್ಪು ಮಾಡಿದ್ದಾರೆ, ಆ ಕಾರಣಕ್ಕಾಗೇ ಅಧಿಕಾರಿಗಳು ಅವರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.