ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಮಹಿಷ ದಸರಾ ಆಚರಣೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಆದ್ರೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಓಪನ್ ಚಾಲೆಂಜ್ ಹಾಕಿದ್ದಾರೆ.

ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
|

Updated on: Sep 23, 2024 | 5:13 PM

ಮೈಸೂರು, (ಸೆಪ್ಟೆಂಬರ್ 23): ಮೈಸೂರಿನಲ್ಲಿ ನಾಡಹಬ್ಬ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ಇದರ ಮಧ್ಯ ಈ ವರ್ಷವೂ ಸಹ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದೆ. ಹೌದು.. ಈ ಬಾರಿಯೂ ಸಹ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಹಿಷ ದಸರಾ ಆಚರಣೆಗೆ ಚಾಮುಂಡಿಬೆಟ್ಟ ಸರಿಯಾದ ಜಾಗವಲ್ಲ. ಮಹಿಷನ ಮೇಲೆ ನಂಬಿಕೆ ಇದ್ದರೆ ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷ ದಸರಾ ಹೆಸರಿನಲ್ಲಿ ಒಡಕು ಮೂಡಿಸಿಕೊಳ್ಳುವುದು ಬೇಡ. ಮುಸ್ಲಿಮರು ಮಹಿಷನನ್ನು ನಂಬಲ್ಲ . ಮಹಿಷನ ಮೆರವಣಿಗೆ ಮೇಲೂ ಮುಸ್ಲಿಮರು ಕಲ್ಲು ಎಸೆಯುತ್ತಾರೆ. ಮಹಿಷ ದಸರಾ ಮಾಡಲು ಚಾಮುಂಡಿಬೆಟ್ಟ ಸರಿಯಾದ ಜಾಗವಲ್ಲ ಎಂದು ಗುಡುಗಿದ್ದಾರೆ.

ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಹಿಂದೂ ಸಮಾಜ ಒಡೆಯುವುದನ್ನು ಬಿಡಿ. ದಸರಾ ಸಂದರ್ಭದಲ್ಲಿ ಅಪಸ್ವರ ಬೇಡ, ಕರ್ಕಶ ಧ್ವನಿ ಬಿಡಿ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮಾಡುತ್ತೇವೆ ಅಂದ್ರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ
ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ
ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ