ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

Updated on: Jan 22, 2025 | 7:21 PM

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ಚಾಲ್ತಿಯಲ್ಲಿದ್ದು, ಈ ಸೀಸನ್ ಬಳಿಕ ಶೋ ಅನ್ನು ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್ ಘೋಷಣೆ ಮಾಡಿದ್ದಾರೆ. ಆದರೆ ಸುದೀಪ್ ಏಕೆ ಬಿಗ್​ಬಾಸ್​ ನಿಂದ ದೂರಾಗುತ್ತಿದ್ದಾರೆ ಎಂದು ಯಾರಿಗೂ ಖಾತ್ರಿ ಇಲ್ಲ. ಇದೀಗ ಪ್ರಥಮ್, ಸುದೀಪ್ ಏಕೆ ಬಿಗ್​ಬಾಸ್ ಬಿಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಳ್ಳೆ ಹುಡ್ಗ ಪ್ರಥಮ್, ಮಾಜಿ ಬಿಗ್​ಬಾಸ್ ವಿನ್ನರ್. ಸುದೀಪ್​ರಿಂದ ಹೊಗಳಿಸಿಕೊಂಡಿದ್ದೂ ಇದೆ, ಬೈಸಿಕೊಂಡಿದ್ದೂ ಇದೆ. ಬಿಗ್​ಬಾಸ್ ವಿನ್ನರ್ ಆದ ಬಳಿಕವೂ ಕೆಲ ಬಾರಿ ಬಿಗ್​ಬಾಸ್ ಮನೆಗೆ ಹೋಗಿ ಬಂದಿದ್ದಾರೆ ಪ್ರಥಮ್. ಇದೀಗ ಸುದೀಪ್, ತಾವಿನ್ನು ಬಿಗ್​ಬಾಸ್ ಶೋ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಇದಕ್ಕೆ ಕಾರಣ ಏನಿರಬಹುದು ಎಂದು ಹಲವರು ತಲೆ ಕೆಡಿಸಿಕೊಂಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಪ್ರಥಮ್, ಸುದೀಪ್, ಬಿಗ್​ಬಾಸ್ ಬಿಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ಬಿಗ್​ಬಾಸ್ ಶೂಟಿಂಗ್​ ಮಾಡಲು ಸುದೀಪ್ ಪಡುವ ಕಷ್ಟ ಹೇಗಿರುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ. ಅಲ್ಲದೆ ಸುದೀಪ್ ಅವರು ಬಿಗ್​ಬಾಸ್ ನಿರೂಪಣೆ ಮುಂದುವರೆಸಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿಯೂ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 22, 2025 07:18 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More