AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಾಗಬೇಕು, ಮಳೆ ಸುರಿಯಲಿ ಅಂತ ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದೇನೆ: ಡಿಕೆ ಶಿವಕುಮಾರ್

ಮಳೆಯಾಗಬೇಕು, ಮಳೆ ಸುರಿಯಲಿ ಅಂತ ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದೇನೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 19, 2025 | 6:45 PM

Share

ಸಾಧನಾ ಸಮಾವೇಶ ಮುಗಿಯುವರೆಗೆ ಹೊಸಪೇಟೆಯಲ್ಲೇ ಉಳಿಯಬೇಕು ಅಂತ ಬಟ್ಟೆಬರೆಯನ್ನೆಲ್ಲ ಹೊತ್ತುಕೊಂಡು ಬಂದಿದ್ದೆ, ಆದರೆ ಬೆಂಗಳೂರಲ್ಲಿ ಮಳೆ ಸುರಿದ ಕಾರಣ ವಾಪಸ್ಸು ಹೋಗುತ್ತಿದ್ದೇನೆ, ಮುಖ್ಯಮಂತ್ರಿ ಮತ್ತು ತಾನು ನಾಳೆ ಬೆಂಗಳೂರು ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಬೇಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಹೊಸಪೇಟೆ, ಮೇ 19: ಸಾಧನಾ ಸಮಾವೇಶದ ತಯಾರಿ ನೋಡಿಕೊಳ್ಳಲು ಬಂದಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಬೆಂಗಳೂರಲ್ಲಿ ಮಳೆಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು ಮತ್ತು ಇನ್ನೂ ಮಳೆಯಾಗಲಿ ಅಂತ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಮಳೆಯಾದರೆ ರಾಜ್ಯಕ್ಕೆ ಎಷ್ಟು ಲಾಭ ಅಂತ ಹಿಂದೆ ಇಂಧನ ಸಚಿವನಾಗಿದ್ದ ತನಗೆ ಗೊತ್ತು, ಜಲಾಶಯಗಳು ತುಂಬುತ್ತವೆ ಮತ್ತು ರೈತರಿಗೆ ಅನೂಕೂಲವಾಗುತ್ತದೆ ಎಂದು ಹೇಳಿದ ಅವರು, ಬೆಂಗಳೂರಲ್ಲಿ ಭಾರೀ ಮಳೆಯಾದರೂ ಯಾವುದೇ ಅನಾಹುತ ಸಂಭವಿಸಿಲ್ಲ, ಒಬ್ಬ ವ್ಯಕ್ತಿ ಸತ್ತಿರುವ ಮಾಹಿತಿ ತನಗೆ ಸಿಕ್ಕಿದೆ, ಬಿಬಿಎಂಪಿ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ, ತಗ್ಗು ಪ್ರದೇಶಗಳಲ್ಲಿ ಮನೆ ಮಾಡಿಕೊಂಡವರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.