ಚಾಮುಂಡಿ ಬೆಟ್ಟದಲ್ಲಿ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ: ಪೊಲೀಸ್ ಕಮೀಷನರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 27, 2025 | 10:32 AM

ಗಣ್ಯರ ಆಗಮನದಿಂದಲೇ ನೂಕುನುಗ್ಗಲು ಮತ್ತು ಗಲಾಟೆ ಸಂಭವಿಸುವುದರಿಂದ ಅವರಿಗೆ ಬೆಳಗ್ಗೆ 5ರಿಂದ 10ರವರೆಗೆ ಮಾತ್ರ ದೇವಿಯ ದರ್ಶನಕ್ಕೆ ಬರುವಂತೆ ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಹಾಗೆಯೇ, ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಬೇರೆ ಮಂತ್ರಿಗಳು ತಮ್ಮ ಬೆಂಬಲಿಗರಿಗೆ ಪಾಸ್ ನೀಡದಂತೆ ವಿನಂತಿಸಿಕೊಂಡಿದ್ದೇವೆ, ಗಣ್ಯರ ಜೊತೆ ಅವರ ಹಿಂಬಾಲಕರು, ಬೆಂಬಲಿಗರು ಆಗಮಿಸುವುದನ್ನು ತಡೆಯಾಲಾಗುವುದು ಎಂದು ಕಮೀಷನರ್ ಹೇಳಿದರು.

ಮೈಸೂರು, ಜೂನ್ 27: ಇಂದು ಆಷಾಢಮಾಸದ ಮೊದಲ ಶುಕ್ರವಾರ (first Friday), ಹಾಗಾಗಿ ನಗರದ ಜಗತ್ಪ್ರಸಿದ್ಧ ಚಾಮುಂಡಿದೇವಿ ದೇವಸ್ಥಾನದ ಅವರಣದಲ್ಲಿ ಭಕ್ತರು ಜಾತ್ರೆಯಂತೆ ನೆರೆದಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮೇಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ ಮತ್ತು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ನಮ್ಮ ಪ್ರತಿನಿಧಿಗೆ ವಿವರಗಳನ್ನು ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ನಿಗಾ ವಹಿಸಲು ಇಬ್ಬರು ಡಿಸಿಪಿ, ಒಬ್ಬ ಹೆಚ್ಚುವರಿ ಎಸ್​ಪಿ, 1,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 100 ಹೋಮ್ ಗಾರ್ಡ್ ಮತ್ತು ಮಹಿಳಾ ತಂಡವೂ ಸೇರಿದಂತೆ 4 ಕೆಎಸ್​ಅರ್​​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಸೀಮಾ ಲಾಟ್ಕರ್ ಹೇಳಿದರು.

ಇದನ್ನೂ ಓದಿ: Aashada Month: ಜೂನ್​ 26ರಿಂದ ಆಷಾಢ ಮಾಸ ಆರಂಭ, ಈ ಕೆಲಸಗಳನ್ನು ತಪ್ಪಾಗಿ ಕೂಡ ಮಾಡಬೇಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.