ಸುಧಾಕರ್ ಬಗ್ಗೆ ಮಾತಾಡಲು ಪ್ರೀತಂ ಗೌಡ ಯಾವ ದೊಣ್ಣೆ ನಾಯಕ ಎಂಬರ್ಥದಲ್ಲಿ ಮಾತಾಡಿದ ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 30, 2025 | 2:41 PM

ಸುಧಾಕರ್ ಬಿಜೆಪಿಗೆ ಬರದೇ ಹೋಗಿದ್ದರೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ರಾಜ್ಯದ ಕಡುಭ್ರಷ್ಟ ಸಿಎಂ ಅನಿಸಿಕೊಳ್ಳುತ್ತಿರಲಿಲ್ಲ ಮತ್ತು ವಿಜಯೇಂದ್ರಗೆ ಹಣದ ದುರಹಂಕಾರ ಬರುತ್ತಿರಲಿಲ್ಲ, ಅದರೆ ವಿಪರ್ಯಾಸವೆಂದರೆ ಇಂಥ ಭ್ರಷ್ಟರು ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದು ಎಂದು ಯತ್ನಾಳ್ ಹೇಳಿದರು.

ಬೆಂಗಳೂರು: ಬಿವೈ ವಿಜಯೇಂದ್ರ ವಿರುದ್ಧ ನಿನ್ನೆ ಡಾ ಕೆ ಸುಧಾಕರ್ ಕೂಗಾಡಿದಕ್ಕೆ ಬಿಜೆಪಿ ನಾಯಕ ಪ್ರೀತಂ ಜೆ ಗೌಡ ಪ್ರತಿಕ್ರಿಯೆ ನೀಡಿ ಸಂಸದರನ್ನು ಎಚ್ಚರಿಸಿರುವುದು ರಾಜ್ಯಾಧ್ಯಕ್ಷನ ವಿರುದ್ಧ ಒಂದು ವರ್ಷದ ಹಿಂದೆಯೇ ರಣಕಹಳೆ ಊದಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸರಿ ಕಂಡಿಲ್ಲ. ನಗರದಲ್ಲಿ ಇಂದು ಮಾಧ್ಯಮದವರು ವಿಷಯವನ್ನು ಪ್ರಸ್ತಾಪಿಸಿದಾಗ, ಪ್ರೀತಂ ಗೌಡ ಯಾವ ಮಹಾನಾಯಕ ಎಂವರ್ಥದಲ್ಲಿ ಯತ್ನಾಳ್ ಮಾತಾಡಿದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಬಿಡಬೇಡ ಅಂತ ಹೇಳಿದ್ದರು, ಅವರ ಮಾತು ಕೇಳದೆ ಬಿಜೆಪಿ ಸೇರಿ ತಪ್ಪು ಮಾಡಿದೆ ಅಂತ ಸುಧಾಕರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಮನಸ್ಸಿಗೆ ನೋವಾದಾಗ ಅಂಥ ಮಾತುಗಳು ನೆನಪಾಗುತ್ತವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಿಜೆಪಿ ಶಿಸ್ತು ಸಮಿತಿ ನೋಟಿಸ್: ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.