AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕ್ಷಣಗಣನೆ: ಸಿದ್ಧತೆ ಹೇಗಿದೆ?

ಭಾರಿ ವಿವಾದದ ಬಳಿಕ ಆರ್​ಎಸ್​ಎಸ್ ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 3.30 ರಿಂದ 5.15ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 16, 2025 | 11:00 AM

Share

ಕಲಬುರಗಿ, ನವೆಂಬರ್​ 16: ಚಿತ್ತಾಪುರದಲ್ಲಿ ಬಹು ನಿರೀಕ್ಷಿತ ಆರ್​ಎಸ್​ಎಸ್ ಪಥಸಂಚಲನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ಕಾನೂನು ಸಮರದ ಬಳಿಕ ಇಂದು ಪಥಸಂಚಲನ ನಡೆಯಲಿದೆ. ಈ ಹಿನ್ನಲೆ ಆರ್​ಎಸ್​ಎಸ್ ಸಂಘಟನೆಯಿಂದ ಚಿತ್ತಾಪುರದ ಬಜಾಜ್​ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಜಿಲ್ಲಾಡಳಿತದ ಮಾಹಿತಿಯ ಪ್ರಕಾರ, 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಈ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನವನ್ನು ನಡೆಯಲಿದ್ದು, ಇದು ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಕೆನರಾ ಬ್ಯಾಂಕ್ ಸರ್ಕಲ್ ಮತ್ತು ಎಪಿಎಂಸಿ ಮಾರ್ಗವಾಗಿ ಸಾಗಿ, ಮತ್ತೆ ಬಜಾಜ್ ಕಲ್ಯಾಣ ಮಂಟಪದಲ್ಲೇ ಕೊನೆಗೊಳ್ಳಲಿದೆ. ಸಂಜೆ 5:15 ರವರೆಗೆ ನಡೆಯಲಿರುವ ಈ ಪಥಸಂಚಲನದ ನಂತರ ವೇದಿಕೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ