Choosing CM deferred: ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಸಿದ್ಧತೆಗಳು ಸ್ಥಗಿತ!

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2023 | 7:18 PM

ಸಿದ್ದರಾಮಯ್ಯನವರ ಅಭಿಮಾನಿಗಳು ನಿರಾಶರಾಗಿರುವುದು ಸಿಎಂ ಆಯ್ಕೆ ಮುಂದೂಡಲ್ಪಟ್ಟಿರುವಷ್ಟೇ ಸತ್ಯ.

ಬೆಂಗಳೂರು: ನಾವು ಅಗಲೇ ಹೇಳಿದ್ದೇವೆ, ಕೂಸು ಹುಟ್ಟುವ ಮೊದಲು ಕುಲಾವಿ ಹೊಲಿಯೋದು ಸರಿಯಲ್ಲ ಅಂತ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಅಂತ ಹೈಕಮಾಂಡ್ (high command) ತೀರ್ಮಾನ ತೆಗೆದುಕೊಳ್ಳುವ ಮೊದಲೇ ಸಿದ್ದರಾಮಯ್ಯ (Siddaramaiah) ಅವರನ್ನು ಅಯ್ಕೆ ಮಾಡಲಾಗಿದೆ, ನಾಳೆ (ಗುರುವಾರ) ಮಧ್ಯಾಹ್ನ 3.30ಕ್ಕೆ ಅವರು ಕಂಠೀರವ ಕ್ರೀಡಾಂಗಣದಲ್ಲಿ (Kanteerava stadium) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ದೇಶದೆಲ್ಲೆಡೆ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಕಾಳ್ಗಿಚ್ಚಿನಂತೆ ಹರಡಿತ್ತು. ಆದರ ಪರಿಣಾಮವಾಗೇ ಕ್ರೀಡಾಂಗಣದಲ್ಲಿ ಈ ಪಾಟಿ ತಯಾರಿಗಳು ಶುರುವಾದವು. ಅದರೆ, ಸಿದ್ದತೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿಯ ಆಯ್ಕೆ ನಾಳೆಯೂ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಗಳು ನಿರಾಶರಾಗಿರುವುದು ಸಿಎಂ ಆಯ್ಕೆ ಮುಂದೂಡಲ್ಪಟ್ಟಿರುವಷ್ಟೇ ಸತ್ಯ ಮಾರಾಯ್ರೇ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.