ಕೆಎನ್ ರಾಜಣ್ಣಗೆ ಅಮೃತಮಹೋತ್ಸವ ಜನ್ಮದಿನ, ಭರ್ಜರಿ ಆಚರಣೆಗೆ ಮಗ ರಾಜೇಂದ್ರ ಉಸ್ತುವಾರಿಯಲ್ಲಿ ಸಿದ್ಧತೆ!

Updated on: Jun 18, 2025 | 9:48 PM

ರಾಜಣ್ಣ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಂದೆಯ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಿದ್ಧತೆಗಳ ಉಸ್ತುವಾರಿ ವಹಿಸಿಕೊಂಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕೆಲದಿನಗಳ ಹಿಂದೆ ರಾಜಣ್ಣ ಮತ್ತು ರಾಜೇಂದ್ರ ಇಬ್ಬರೂ ಸುದ್ದಿಯಲ್ಲಿದ್ದರು. ರಾಜಣ್ಣ ತಮ್ಮನ್ನು ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಅಂತ ಆರೋಪಿಸಿದರೆ ರಾಜೇಂದ್ರ ತನ್ನ ಕೊಲೆಗೆ ಸುಪಾರಿ ನೀಡಲಾಗಿತ್ತು ಎಂದಿದ್ದರು.

ತುಮಕೂರು, ಜೂನ್ 18: ಕ್ಯಾತಸಂದ್ರ ನಂಜಪ್ಪ ರಾಜಣ್ಣ ರಾಜ್ಯದಲ್ಲಿ ಕೆಎನ್ ರಾಜಣ್ಣ ಎಂದೇ ಜನಪ್ರಿಯರು. ಹಾಗೆ ನೋಡಿದರೆ ಅವರ ಹುಟ್ಟುಹಬ್ಬ ಏಪ್ರಿಲ್ 13ರಂದೇ ನೆರವೇರಿದೆ. ಅದರೆ, ಅಮೃತ ಮಹೋತ್ಸವ ಜನ್ಮದಿನವನ್ನು (platinum jubilee) ಜೂನ್ 21 ನಗರದ ಬಿಹೆಚ್ ರಸ್ತೆಯಲ್ಲಿರುವ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಅದಕ್ಕಾಗಿ ಸಿದ್ಧತೆಗಳು ಯದ್ಧೋಪಾದಿಯಲ್ಲಿ ನಡೆಯುತ್ತಿವೆ. ರಾಜಣ್ಣ ಬರ್ತ್​ಡೇ ಜೊತೆ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಸಹ ಇಟ್ಟುಕೊಳ್ಳಲಾಗಿದೆ ಎಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ. ಸುಮಾರು 45,000 ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆಯಂತೆ.

ಇದನ್ನೂ ಓದಿ:    ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿ ಕುತೂಹಲ ಕೆರಳುವಂತೆ ಮಾಡಿದ ಎಮ್ಮೆಲ್ಸಿ ರಾಜೇಂದ್ರ ರಾಜಣ್ಣ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More