Satyameva Jayate Convention: ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಒಂದು ವಾರ ಮೊದಲೇ ಕೊಲಾರದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ

Updated on: Apr 01, 2023 | 2:41 PM

ಸಿದ್ಧತೆಗಳನ್ನು ವೀಕ್ಷಿಸಲು ಇಂದು ರಂದೀಪ್ ಸುರ್ಜೆವಾಲಾ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕೋಲಾರಗೆ ಭೇಟಿ ನೀಡಲಿದ್ದಾರೆ.

ಕೋಲಾರ: ಹಾಗೆ ನೋಡಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ನಗರಕ್ಕೆ ಬರಬೇಕಿತ್ತು. ಆದರೆ ಅವರ ಪ್ರವಾಸವನ್ನು ಏಪ್ರಿಲ್ 9 ಕ್ಕೆ ಮುಂದೂಡಲಾಗಿದೆ. ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ರದ್ದಾಗುವುದಕ್ಕೆ ಮತ್ತು ಅವರಿಗೆ ಜೈಲು ಶಿಕ್ಷೆಯಾಗುವುದಕ್ಕೆ 2019ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣವೇ ಕಾರಣವಾಗಿತ್ತು. ಹಾಗಾಗಿ, ಅವರು ತಮ್ಮ ಹೋರಾಟವನ್ನು ಇಲ್ಲಿಂದಲೇ ಆರಂಭಿಸಲು ನಿರ್ಧರಿಸಿದ್ದಾರೆ. ಏಪ್ರಿಲ್ 9 ರಂದು ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತಾಡಲಿದ್ದಾರೆ. ಕಾರ್ಯಕ್ರಮಕ್ಕೆ ಒಂದು ವಾರ ಮೊದಲೇ ತಯಾರಿ ನಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸಿದ್ಧತೆಗಳನ್ನು ವೀಕ್ಷಿಸಲು ಇಂದು ರಂದೀಪ್ ಸುರ್ಜೆವಾಲಾ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕೋಲಾರಗೆ ಭೇಟಿ ನೀಡಲಿದ್ದಾರೆ.

ಮತ್ತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More