ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು

Updated on: Jun 20, 2025 | 9:18 PM

"ನನಗೆ ನನ್ನ ಕಣ್ಣೀರನ್ನು ತಡೆದುಕೊಳ್ಳಲಾಗಲಿಲ್ಲ. ಅವರು ಕೇವಲ ತಮ್ಮ ಧ್ವನಿಯೊಂದಿಗೆ ಹಾಡುತ್ತಿಲ್ಲ, ಬದಲಾಗಿ ಅವರ ಹೃದಯಗಳೊಂದಿಗೆ ಹಾಡುತ್ತಿದ್ದಾರೆ. ದೇವರೇ ಅವರ ಮಧುರ ಮೂಲಕ ಪ್ರತಿಧ್ವನಿಸುತ್ತಿದ್ದಾನೆ ಎಂದು ಭಾಸವಾಯಿತು" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಇಂದು ರಾಷ್ಟ್ರೀಯ ದೃಷ್ಟಿ ವಿಕಲಚೇತನರ ಸಬಲೀಕರಣ ಸಂಸ್ಥೆಯ ವಿದ್ಯಾರ್ಥಿಗಳು ಹಾಡಿನ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ಅವರು ಭಾವುಕರಾದರು.

ಡೆಹ್ರಾಡೂನ್, ಜೂನ್ 20: ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಜೂನ್ 20) ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ದೃಷ್ಟಿ ವಿಕಲಚೇತನರ ರಾಷ್ಟ್ರೀಯ ಸಬಲೀಕರಣ ಸಂಸ್ಥೆಯ (NIEPVD) ವಿದ್ಯಾರ್ಥಿಗಳು ತಮ್ಮ 67ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಹುಟ್ಟುಹಬ್ಬದ ಹಾಡನ್ನು ಹಾಡಿದಾಗ ಭಾವುಕರಾದರು. ವಿದ್ಯಾರ್ಥಿಗಳ ಹೃದಯಸ್ಪರ್ಶಿ ಹಾಡನ್ನು ಕೇಳುತ್ತಾ ತಮ್ಮ ಭಾವುಕತೆಯನ್ನು ತಡೆದುಕೊಳ್ಳಲು ಹೆಣಗಾಡುತ್ತಿದ್ದ ರಾಷ್ಟ್ರಪತಿಯವರ ಕಣ್ಣಲ್ಲಿ ನೀರು ತುಂಬಿತು. ಆ ಕ್ಷಣದ ಫೋಟೋಗಳು ಮತ್ತು ವೀಡಿಯೊಗಳು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More