ಪ್ರತಾಪ್ ಸಿಂಹರನ್ನು ನೋಡಿ ಬೆನ್ನು ತಟ್ಟಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚಿಸಿದ್ದಾರೆ. ಈ ವೇಳೆ ಬಿಜೆಪಿ​​ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನುತಟ್ಟಿದ್ದಾರೆ.

ಪ್ರತಾಪ್ ಸಿಂಹರನ್ನು ನೋಡಿ ಬೆನ್ನು ತಟ್ಟಿದ ಪ್ರಧಾನಿ ಮೋದಿ
|

Updated on: Apr 14, 2024 | 6:42 PM

ಮೈಸೂರು, ಏಪ್ರಿಲ್​ 14: ಕರ್ನಾಟಕ ಲೋಕಸಭಾ ಪ್ರಚಾರದ ಅಖಾಡಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಧುಮುಕಿದ್ದಾರೆ. ಚುನಾವಣೆ ಘೋಷಣೆ ದಿನ ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ರಣಕಹಳೆ ಮೊಳಗಿಸಿದ್ದ ಮೋದಿ, ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ​​ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನು ತಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us