ಪ್ರತಾಪ್ ಸಿಂಹರನ್ನು ನೋಡಿ ಬೆನ್ನು ತಟ್ಟಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚಿಸಿದ್ದಾರೆ. ಈ ವೇಳೆ ಬಿಜೆಪಿ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನುತಟ್ಟಿದ್ದಾರೆ.
ಮೈಸೂರು, ಏಪ್ರಿಲ್ 14: ಕರ್ನಾಟಕ ಲೋಕಸಭಾ ಪ್ರಚಾರದ ಅಖಾಡಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಧುಮುಕಿದ್ದಾರೆ. ಚುನಾವಣೆ ಘೋಷಣೆ ದಿನ ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ರಣಕಹಳೆ ಮೊಳಗಿಸಿದ್ದ ಮೋದಿ, ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನು ತಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us