ಅಮೇರಿಕದ ಜೈಲುಗಳಲ್ಲೂ ಕೈದಿಗಳು ಫೋನ್ ಬಳಸುತ್ತಾರೆ, ಡ್ರಗ್ಸ್ ಸಿಗುತ್ತವೆ: ಸುಮಲತಾ ಅಂಬರೀಶ್

Updated on: Aug 27, 2024 | 3:20 PM

ಲೋಕಸಭಾ ಚುನಾವಣೆಯ ನಂತರ ರಾಜಕೀಯದಿಂದ ದೂರ ಇರುವ ಸುಮಲತಾ ಮಾತಿನ ತಾತ್ಪರ್ಯ ಅರ್ಥವಾಗಲ್ಲ, ಅಮೇರಿಕ ಜೈಲುಗಳಲ್ಲಿ ಡ್ರಗ್ಸ್ ಸರಬರಾಜು ಅಗುತ್ತಿದ್ದರೆ ಭಾರತ ಅಥವಾ ಬೆಂಗಳೂರು ಜೈಲುಗಳಲ್ಲೂ ಅಂಥದ್ದು ನಡೆಯಬೇಕೇ? ಸ್ವಂತ ಮಗನೆಂದು ಪರಿಗಣಿಸುವ ದರ್ಶನ್ ಸಮರ್ಥನೆಗಾಗಿ ಅವರು ಹೀಗೆ ಹೇಳಿದರೇ?

ಬೆಂಗಳೂರು: ಜೈಲಲ್ಲಿ ಕೆಲ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್, ಅಮೇರಿಕ ಸೇರಿದಂತೆ ವಿಶ್ವದ ಅನೇಕ ದೇಶಗಳ ಜೈಲುಗಳಲ್ಲಿ ಕೈದಿಗಳು ಫೋನ್ ಬಳಸುತ್ತಾರೆ, ಡ್ರಗ್ಸ್ ಪೂರೈಕೆಯಾಗುತ್ತದೆ ಮತ್ತು ಉಳಿದೆಲ್ಲ ಅವ್ಯವಹಾರಗಳು ನಡೆಯುತ್ತವೆ. ಕೇವಲ ಬೆಂಗಳೂರು ಸೆಂಟ್ರಲ್ ಜೈಲನ್ನು ದೂರುವುದು ಸರಿಯಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಎಣ್ಣೆ-ಬಾಡೂಟ, ನನ್ನ ಮಗನಿಗೆ ಜೈಲೂಟವಾದರೂ ಸರಿಯಾಗಿ ಸಿಗುತ್ತಿದೆಯಾ ಅಂತ ಗೊತ್ತಿಲ್ಲ: ಆರೋಪಿ ನಂದೀಶ್ ತಂದೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More