AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಸ್​​

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಸ್​​

ಅಕ್ಷಯ್​ ಪಲ್ಲಮಜಲು​​
|

Updated on: Oct 17, 2025 | 3:35 PM

Share

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಟೈರ್ ಬ್ಲಾಸ್ಟ್‌ನಿಂದ ಹೊತ್ತಿ ಉರಿದಿದೆ. ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಈ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ, ಎಲ್ಲಾ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಧ್ಯರಾತ್ರಿ 2:30ರ ಸುಮಾರಿಗೆ ಸಂಭವಿಸಿದ್ದು, ವಿದ್ಯಾರ್ಥಿಗಳ ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಗಳೂರು, ಅ.17: ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ (Bengaluru-Ananthpur Highway) ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್​​​ ಸಂಪೂರ್ಣ ಭಸ್ಮವಾಗಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಈ ಬಸ್‌ನ ಟೈರ್ ಬ್ಲಾಸ್ಟ್ ಆಗಿದೆ, ಈ ವೇಳೆ ಏಕಾಏಕಿ ಬಸ್​​ಗೆ ​​ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಬಸ್​​​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಬಸ್​​​​ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂಡಲೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಬಸ್ಸಿನಲ್ಲಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಕೂಡ ಇದ್ದರು. ಇನ್ನು ಈ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ಈ ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಬಸ್ಸಿನಲ್ಲಿ ಸುಟ್ಟ ವಾಸನೆ ಬರುತ್ತಿದೆ ಎಂದು ಹೇಳಿದ್ರು ಚಾಲಕ ಬಸ್ ನಿಲ್ಲಿಸಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ