ಸರ್ ಎಂ ವಿಶ್ವೇಶ್ವರಯ್ಯರಂಥ ಮಹಾನ್ ಆರ್ಕಿಟೆಕ್ಟ್ರನ್ನು ದೇಶಕ್ಕೆ ನೀಡಿದ ಮುದ್ದೇನಹಳ್ಳಿಯ ಪುಣ್ಯಭೂಮಿಗೆ ಭೇಟಿ ನೀಡಿದ್ದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಮುದ್ದೇನಹಳ್ಳಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಎಂದಿನಂತೆ ಕನ್ನಡದಲ್ಲೇ ಭಾಷಣ ಆರಂಭಿಸಿದರು.
ಚಿಕ್ಕಬಳ್ಳಾಪುರ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮುದ್ದೇನಹಳ್ಳಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಎಂದಿನಂತೆ ಕನ್ನಡದಲ್ಲೇ (Kannada) ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯು ಎಸ್ ಎಂ ವಿಶ್ವೇಶ್ವರಯ್ಯ (Sir M Visvesvaraya) ರೂಪದಲ್ಲಿ ಭಾರತಕ್ಕೆ ಒಬ್ಬ ಮಹಾನ್ ಇಂಜಿನೀಯರ್ ರನ್ನು ನೀಡಿದ ಪುಣ್ಯ ಭೂಮಿ, ಇಲ್ಲಿಗೆ ಭೇಟಿ ನೀಡಿ ಅವರ ಸಮಾಧಿ ಮತ್ತು ವಸ್ತು ಸಂಗ್ರಹಾಲಯ ಸಂದರ್ಶಿಸುವ ಅವಕಾಶ ಸಿಕ್ಕಿದ್ದು ತಮ್ಮ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ಈ ಪುಣ್ಯಭೂಮಿಗೆ ತಾವು ತಲೆಬಾಗಿ ನಮಸ್ಕರಿಸುವುದಾಗಿ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 25, 2023 01:30 PM
Follow Us
Latest Videos
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
