ಸರ್ ಎಂ ವಿಶ್ವೇಶ್ವರಯ್ಯರಂಥ ಮಹಾನ್ ಆರ್ಕಿಟೆಕ್ಟ್​ರನ್ನು ದೇಶಕ್ಕೆ ನೀಡಿದ ಮುದ್ದೇನಹಳ್ಳಿಯ ಪುಣ್ಯಭೂಮಿಗೆ ಭೇಟಿ ನೀಡಿದ್ದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 25, 2023 | 5:06 PM

ಮುದ್ದೇನಹಳ್ಳಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಎಂದಿನಂತೆ ಕನ್ನಡದಲ್ಲೇ ಭಾಷಣ ಆರಂಭಿಸಿದರು.

ಚಿಕ್ಕಬಳ್ಳಾಪುರ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮುದ್ದೇನಹಳ್ಳಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಎಂದಿನಂತೆ ಕನ್ನಡದಲ್ಲೇ (Kannada) ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯು ಎಸ್ ಎಂ ವಿಶ್ವೇಶ್ವರಯ್ಯ (Sir M Visvesvaraya) ರೂಪದಲ್ಲಿ ಭಾರತಕ್ಕೆ ಒಬ್ಬ ಮಹಾನ್ ಇಂಜಿನೀಯರ್ ರನ್ನು ನೀಡಿದ ಪುಣ್ಯ ಭೂಮಿ, ಇಲ್ಲಿಗೆ ಭೇಟಿ ನೀಡಿ ಅವರ ಸಮಾಧಿ ಮತ್ತು ವಸ್ತು ಸಂಗ್ರಹಾಲಯ ಸಂದರ್ಶಿಸುವ ಅವಕಾಶ ಸಿಕ್ಕಿದ್ದು ತಮ್ಮ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ಈ ಪುಣ್ಯಭೂಮಿಗೆ ತಾವು ತಲೆಬಾಗಿ ನಮಸ್ಕರಿಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 25, 2023 01:30 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.