AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ

ಅಕ್ಷಯ್​ ಪಲ್ಲಮಜಲು​​
|

Updated on: Dec 23, 2025 | 4:36 PM

Share

ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಕರ್ನಾಟಕ ಭವನದಲ್ಲಿ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಕ್ರಮಗಳಿಂದ ಯೋಜನೆಗೆ ಹಿನ್ನಡೆಯಾಗಿದ್ದು, ಪಂಚಾಯತ್‌ಗಳ ಅಧಿಕಾರ ಕಸಿದುಕೊಳ್ಳಲಾಗಿದೆ ಎಂದರು. ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಭಾರತ ದೇಶವು ಸಂವಿಧಾನದ ಆಧಾರದ ಮೇಲೆ ನಡೆಯುತ್ತದೆ, ಯಾವುದೇ ಧಾರ್ಮಿಕ ಗ್ರಂಥಗಳಿಂದಲ್ಲ ಎಂದು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್‌ನ ಸಂವಿಧಾನಿಕ ಮಾನ್ಯತೆಯನ್ನೂ ಪ್ರಶ್ನಿಸಿದರು.

ಬೆಂಗಳೂರು, ಡಿ.23: ಕರ್ನಾಟಕ ಭವನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಸಮಾಲೋಚನಾ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಸಭೆಯಲ್ಲಿ ಅರ್ಥಶಾಸ್ತ್ರಜ್ಞರು, ಸಮಾಜಶಾಸ್ತ್ರಜ್ಞರು ಮತ್ತು ಕಾನೂನು ತಜ್ಞರೊಂದಿಗೆ ಈ ಯೋಜನೆಗೆ ಸಂಬಂಧಿಸಿದಂತೆ ಭವಿಷ್ಯದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು. ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಾಶ ಮಾಡಿದೆ ಎಂದು ಖರ್ಗೆ ಆರೋಪಿಸಿದರು. ಈ ಯೋಜನೆಯು ಉದ್ಯೋಗ ಮತ್ತು ಜೀವನೋಪಾಯದ ಭರವಸೆಯನ್ನು ಕಸಿದುಕೊಂಡಿದೆ, ಪಂಚಾಯತ್‌ಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಮತ್ತು ರಾಜ್ಯಕ್ಕೆ ಧನಸಹಾಯವನ್ನು ಬದಲಿಸಿದೆ. ಇದು ಪಂಚಾಯತ್ ರಾಜ್ ವ್ಯವಸ್ಥೆಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಅವರು ಟೀಕಿಸಿದರು. ಇದೇ ವೇಳೆ, ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸೂರ್ಯ ಮತ್ತು ಚಂದ್ರರ ಹುಟ್ಟು ವಿಜ್ಞಾನ. ನಮ್ಮ ದೇಶವು ಸಂವಿಧಾನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ, ಅದು ಆರ್‌ಎಸ್‌ಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು. ಆರ್‌ಎಸ್‌ಎಸ್ ಸಂವಿಧಾನೇತರ ಸಂಸ್ಥೆಯಲ್ಲ. ಆರ್‌ಎಸ್‌ಎಸ್ ಸಂಸ್ಥೆಗೆ ನೋಂದಣಿಯ ಅಗತ್ಯವಿದೆ. ಅದರ ಆದಾಯದ ಮೂಲಗಳ ಬಗ್ಗೆಯೂ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಭಾರತ ದೇಶವು ಯಾವುದೇ ಧಾರ್ಮಿಕ ಗ್ರಂಥಗಳಿಂದ ನಡೆಯುತ್ತಿಲ್ಲ, ಸಂವಿಧಾನದಿಂದ ನಡೆಯುತ್ತದೆ ಎಂದು ಹೇಳಿದರು. ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. 3000 ವರ್ಷಗಳಿಂದ ಇರುವ ಧರ್ಮವನ್ನು ರಕ್ಷಿಸಲು 100 ವರ್ಷವೂ ಆಗದ ಆರ್‌ಎಸ್‌ಎಸ್‌ಗೆ ಯಾರೂ ಬರೆದುಕೊಟ್ಟಿಲ್ಲ ಎಂದರು. ಕಾಂಗ್ರೆಸ್ ಪಕ್ಷವು ಆರ್‌ಎಸ್‌ಎಸ್‌ನ ಸಂವಿಧಾನಿಕ ಮಾನ್ಯತೆಯ ಬಗ್ಗೆ ಪ್ರಶ್ನಿಸುತ್ತದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ