ಟ್ರೋಲ್ ಆಗಿ ಬೀದಿ ಬಸವ ಎಂದು ಕರೆಸಿಕೊಳ್ಳುತ್ತಿರುವ ಪ್ರಿಯಾಂಕ್ ಖರ್ಗೆಯಲ್ಲಿ ಇನ್ಯಾವಾಗ ಸುಧಾರಣೆ? ಚಲವಾದಿ

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2025 | 4:17 PM

ಪ್ರಿಯಾಂಕ್ ಖರ್ಗೆ ತನ್ನನ್ನು ಮನುವಾದಿ ಅನ್ನುತ್ತಾರೆ, ತನ್ನದೇನೂ ಅಭ್ಯಂತರವಿಲ್ಲ, ಅನ್ನಲಿ. ಡಾ ಬಿಅರ್ ಅಂಬೇಡ್ಕರ್ ಅವರ ಸಂವಿಧಾನ ದೇಶದಲ್ಲಿ ಜಾರಿಯಾದ ದಿನವೇ ಮನುವಾದ ಸತ್ತುಹೋಯಿತು, ಆದರೆ ಕಾಂಗ್ರೆಸ್ ಅ ಪದವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದೆ, ರಾಜ್ಯದಲ್ಲಿ ದಲಿತರ ಮಾರಣಹೋಮ ನಡೆಯುತ್ತಿದೆ, ₹42,000 ಕೋಟಿ ದುರುಪಯೋಗವಾಗಿರೋದನ್ನು ಯಾಕೆ ಯಾರೂ ಪ್ರಶ್ನಿಸುತ್ತಿಲ್ಲ ಎಂದು ಚಲವಾದಿ ಕೇಳಿದರು.

ಬೆಂಗಳೂರು, ಮೇ 29: ಬಿಜೆಪಿಯಲ್ಲಿರುವ ಗಟ್ಟಿಧ್ವನಿಯ ನಾಯಕರನ್ನೆಲ್ಲ ಮಟ್ಟ ಹಾಕುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ಮೊದಲು ಸಿಟಿ ರವಿಯವರನ್ನು ಟಾರ್ಗೆಟ್ ಮಾಡಿದರು, ನಂತರ ಇದ್ದುದನ್ನು ಇದ್ದಂಗೆ ಹೇಳುತ್ತಾ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡುತ್ತಿರುವ ತನ್ನ ಮೇಲೆ ಹಗೆ ತೀರಿಸಿಕೊಳ್ಳುವ ಪ್ರಯತ್ನ ನಡೆಯಿತು, ಈಗ ಮತ್ತೊಂದು ಗಟ್ಟಿ ಧ್ವನಿಯಾಗಿರುವ ಎನ್ ರವಿಕುಮಾರ್ ಅವರನ್ನು ತೇಜೋವಧೆ ಮಾಡುವ ಪ್ರಯತ್ನ ನಡದಿದೆ ಎಂದು ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಚಲವಾದಿ ಹೇಳಿದರು. ಪ್ರಿಯಾಂಕ್ ಖರ್ಗೆ (Priyank Kharge) ಯಾವ ಪಾಟಿ ಟ್ರೋಲ್ ಆಗುತ್ತಿದ್ದಾರೆಂದರೆ ಜನ ಅವರನ್ನು ಬೀದಿ ಬಸವ ಎನ್ನಲಾರಂಭಿಸಿದ್ದಾರೆ, ಇನ್ನಾದರೂ ಅವರು ತನ್ನ ವಿರುದ್ಧ ಹಲ್ಲು ಮಸೆಯುವುದನ್ನು ನಿಲ್ಲಿಸಲಿ ಎಂದು ಚಲವಾದಿ ಹೇಳಿದರು.

ಇದನ್ನೂ ಓದಿ:  ಹಿಂದೂಗಳು ಟಾರ್ಗೆಟ್ ಆಗಿದ್ದನ್ನು ಅಲ್ಲಗಳೆಯುವ ಪ್ರಿಯಾಂಕ್ ಖರ್ಗೆ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ: ಚಲವಾದಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.