ಆರ್ಎಸ್ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ: ಸಂವಾದದಲ್ಲಿ ಭಾಗಿಯಾಗಲಿರುವ ಪ್ರಿಯಾಂಕ್ ಖರ್ಗೆ
ಆರ್ಎಸ್ಎಸ್ ನೋಂದಣಿ ಅಭಿಯಾನವು ರಾಷ್ಟ್ರಮಟ್ಟದಲ್ಲಿ ಚುರುಕುಗೊಂಡಿದೆ. ಇದರ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ ಸಮಾಜವಾದಿ ಸಂಗಮ್ ವತಿಯಿಂದ "ಆರ್ಎಸ್ಎಸ್ ನೋಂದಣಿ ಯಾಕೆ ಅಗತ್ಯ?" ಎಂಬ ಸಂವಾದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಎಸ್ಎಸ್ ಹಣಕಾಸು ಮೂಲಗಳ ಕುರಿತು ಚರ್ಚಿಸಲಿದ್ದಾರೆ.
ಬೆಂಗಳೂರು/ದೆಹಲಿ, ಜುಲೈ 28: ಆರ್ಎಸ್ಎಸ್ ನೋಂದಣಿಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಅಭಿಯಾನವೊಂದು ಚುರುಕುಗೊಂಡಿದೆ. ಈ ಅಭಿಯಾನದ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ “ಆರ್ಎಸ್ಎಸ್ ನೋಂದಣಿ ಯಾಕೆ ಅಗತ್ಯ?” ಎಂಬ ವಿಷಯದ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಮಾಜವಾದಿ ಸಂಗಮ್ ಸಂಸ್ಥೆಯು ಮಧ್ಯಾಹ್ನ 3:30ಕ್ಕೆ ಈ ಸಂವಾದವನ್ನು ಹಮ್ಮಿಕೊಂಡಿದ್ದು, ಕರ್ನಾಟಕದ ಸಚಿವರಾದ ಪ್ರಿಯಾಂಕ್ ಖರ್ಗೆ ಇದರಲ್ಲಿ ಭಾಗವಹಿಸಲಿದ್ದಾರೆ. ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಆರ್ಎಸ್ಎಸ್ ಸಂಸ್ಥೆಯು ಏಕೆ ನೋಂದಣಿ ಮಾಡಿಕೊಳ್ಳಬೇಕು ಮತ್ತು ಅದರ ಅಗತ್ಯತೆ ಏನು ಎಂಬುದರ ಬಗ್ಗೆ ಪ್ರಮುಖವಾಗಿ ಚರ್ಚೆ ನಡಡೆಯಲಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್ ದಿ ಹೆಲ್ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
