ಬಿಗ್​ ಬಾಸ್​ ಬೆಡಗಿ ಪ್ರಿಯಾಂಕಾ ತಿಮ್ಮೇಶ್​ಗೆ ಕೋಮಲ್​ ಜತೆ ನಟಿಸೋ ಅವಕಾಶ

ಕೋಮಲ್​ ಅಭಿನಯದ 25ನೇ ಸಿನಿಮಾ ‘ಕುಟೀರ’ ಸೆಟ್ಟೇರಿದೆ. ಈ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್​ ಆಯ್ಕೆ ಆಗಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ತಿಮ್ಮೇಶ್​ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ‘ಕುಟೀರ’ ಸಿನಿಮಾದಲ್ಲಿ ಪ್ರಿಯಾಂಕಾ ತಿಮ್ಮೇಶ್​ ಅವರ ಪಾತ್ರ ಮಾಡರ್ನ್​ ಆಗಿರಲಿದೆ.

ಬಿಗ್​ ಬಾಸ್​ ಬೆಡಗಿ ಪ್ರಿಯಾಂಕಾ ತಿಮ್ಮೇಶ್​ಗೆ ಕೋಮಲ್​ ಜತೆ ನಟಿಸೋ ಅವಕಾಶ
|

Updated on: Feb 19, 2024 | 2:45 PM

ನಟಿ ಪ್ರಿಯಾಂಕಾ ತಿಮ್ಮೇಶ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ (Bigg Boss Kannada) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದರು. ಈಗ ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಾಸ್ಯ ನಟ ಕೋಮಲ್​ (Komal Kumar) ಅವರು ಹೀರೋ ಆಗಿ ಅಭಿನಯಿಸುತ್ತಿರುವ 25ನೇ ಸಿನಿಮಾಗೆ ಪ್ರಿಯಾಂಕಾ ತಿಮ್ಮೇಶ್​ ನಾಯಕಿ ಆಗಿದ್ದಾರೆ. ಈ ಸಿನಿಮಾಗೆ ‘ಕುಟೀರ’ ಎಂದು ಹೆಸರು ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಸಮಾರಂಭವು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಈ ವೇಳೆ ಪ್ರಿಯಾಂಕಾ ತಿಮ್ಮೇಶ್​ ಮಾತನಾಡಿದರು. ‘ನಾನು ಮೊದಲು ಈ ನಿರ್ಮಾಪಕರನ್ನು ಭೇಟಿ ಮಾಡಿದ್ದು ಬೇರೆ ಸಿನಿಮಾದ ಕಥೆ ಕೇಳಲು. ಆದರೆ ನನಗೆ ಈ ಸಿನಿಮಾದ ಅವಕಾಶ ಸಿಕ್ಕಿತು. ಈ ಸಿನಿಮಾದಲ್ಲಿ ನನಗೆ ಆಂಗ್ಲೋ ಇಂಡಿಯನ್​ ಹುಡುಗಿಯ ಪಾತ್ರ ಇದೆ. ಅಭಿನಯಕ್ಕೆ ತುಂಬ ಪ್ರಾಮುಖ್ಯತೆ ಇರುವಂತಹ ಪಾತ್ರವಿದು. ಕೋಮಲ್​ ಅವರ ಅನೇಕ ಸಿನಿಮಾಗಳನ್ನು ನೋಡಿ ನಾವು ನಕ್ಕು ಎಂಜಾಯ್​ ಮಾಡಿದ್ದೇವೆ. ಈಗ ಅವರ ಸಿನಿಮಾದಲ್ಲಿ ಸಹ-ಕಲಾವಿದೆ ಆಗಿದ್ದಕ್ಕೆ ತುಂಬ ಖುಷಿಯಾಗಿದೆ’ ಎಂದು ಪ್ರಿಯಾಂಕಾ ತಿಮ್ಮೇಶ್ (Priyanka Thimmesh)​ ಹೇಳಿದ್ದಾರೆ. ಈ ಸಿನಿಮಾಗೆ ‘ಕಂಸಾಳೆ ಫಿಲಂಸ್’ ಮೂಲಕ ಮಧು ಮರಿಸ್ವಾಮಿ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೂಪ್ ಆಂಟೋನಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!