Priyanka Upendra: ಪ್ರಿಯಾಂಕಾ ಅವರ ನಿಜವಾದ ಕೋಪವನ್ನು ಉಪೇಂದ್ರ ನೋಡಿದ್ದಾರಂತೆ!; ಕುತೂಹಲಕರ ಮಾಹಿತಿ ಇಲ್ಲಿದೆ

Ugravathara teaser launch: ಸ್ಯಾಂಡಲ್​ವುಡ್ ನಟಿ ಪ್ರಿಯಾಂಕಾ ಉಪೇಂದ್ರ ಮಾಸ್ ನಾಯಕಿಯ ಅವತಾರ ತಾಳಿದ್ದಾರೆ. ಉಗ್ರಾವತಾರ ಚಿತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಇಂದು ಅದರ ಟೀಸರ್ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಕೆಲವು ಕುತೂಹಲಕರ ವಿಚಾರಗಳನ್ನು ಪ್ರಿಯಾಂಕಾ ಹಂಚಿಕೊಂಡಿದ್ದಾರೆ.

Priyanka Upendra: ಪ್ರಿಯಾಂಕಾ ಅವರ ನಿಜವಾದ ಕೋಪವನ್ನು ಉಪೇಂದ್ರ ನೋಡಿದ್ದಾರಂತೆ!; ಕುತೂಹಲಕರ ಮಾಹಿತಿ ಇಲ್ಲಿದೆ
| Updated By: shivaprasad.hs

Updated on:Nov 12, 2021 | 5:15 PM

ಸ್ಯಾಂಡಲ್​ವುಡ್ ನಟಿ ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ಚಿತ್ರತಂಡ ಅದ್ದೂರಿಯಾಗಿ ಟೀಸರ್ ಬಿಡುಗಡೆ ಮಾಡಿದೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ತಮಾಷೆಯಾಗಿ, ಪ್ರಿಯಾಂಕಾ ಅವರ ನಿಜವಾದ ಉಗ್ರಾವತಾರವನ್ನು ನಾನು ಮನೆಯಲ್ಲಿ ನೋಡಿದ್ದೇನೆ. ಚಿತ್ರದಲ್ಲಿ ಬೇರೆ ರೀತಿಯ ಉಗ್ರಾವತಾರ ಇದೆ, ನೋಡಿ ಎಂದಿದ್ದಾರೆ. ಈ ಕುರಿತಂತೆ ನಂತರ ಮಾತನಾಡಿರುವ ಪ್ರಿಯಾಂಕಾ ಹಲವು ಕುತೂಹಲಕರ ವಿಚಾರಗಳನ್ನು ತೆರೆದಿಟ್ಟಿದ್ದಾರೆ. ‘ನನ್ನ ಕೋಪವನ್ನು ಉಪೇಂದ್ರ ಅವರು ನೋಡಿದ್ದಾರೆ. ಎಲ್ಲಾ ಹೆಂಗಸರಿಗೂ ಅವರ ಗಂಡಂದಿರ ಕುರಿತು ಕೋಪ ಇರತ್ತಲ್ವಾ’ ಎಂದು ನಕ್ಕಿದ್ದಾರೆ. ಎಲ್ಲರಿಗೂ ಕೋಪ ಇರುತ್ತದಲ್ವಾ, ಅದನ್ನು ನಾವು ಸರಿಯಾಗಿ ನಿರ್ವಹಿಸಬೇಕಷ್ಟೇ ಎಂದು ಅವರು ಕಿವಿಮಾತನ್ನೂ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಉಪ್ಪಿಯ ಮಧ್ಯೆ ಕೊನೆಗೆ ಯಾರು ಕಾಂಪ್ರಮೈಸ್ ಆಗುತ್ತಾರೆ ಎಂಬ ಪ್ರಶ್ನೆಗೆ ಯಾರು ತಪ್ಪು ಮಾಡಿರುತ್ತಾರೋ ಅವರೇ ಕ್ಷಮೆ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ.

ಪಕ್ಕಾ ಆಕ್ಷನ್ ಚಿತ್ರವಾಗಿರುವ ‘ಉಗ್ರಾವತಾರ’ದಲ್ಲಿ ಮಾಸ್ ನಾಯಕಿಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಮಾಲಾಶ್ರೀ, ವಿಜಯಶಾಂತಿ ಸೇರಿದಂತೆ ಬಾಲಿವುಡ್ ಹಾಗೂ ಹಾಲಿವುಡ್ ನಟಿಯರು ತಮಗೆ ಪ್ರೇರಣೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

Swara Bhasker: ನಿಮಗಿಂತ ನಮ್ಮ ಮನೆ ಕೆಲಸದಾಕೆ ಚೆನ್ನಾಗಿದ್ದಾಳೆ ಎಂದು ಕೀಳು ದರ್ಜೆಯ ಕಾಮೆಂಟ್ ಮಾಡಿದವನಿಗೆ ಖಡಕ್ ಉತ್ತರ ನೀಡಿದ ನಟಿ

‘ಪುನೀತ್​ ನಮನ’ ಕಾರ್ಯಕ್ರಮದಲ್ಲಿ ಏನೆಲ್ಲ ಇರಲಿದೆ? ಇಲ್ಲಿದೆ ಸುದ್ದಿಗೋಷ್ಠಿ ಮಾಹಿತಿ

Published On - 5:13 pm, Fri, 12 November 21

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್