ಕಾವೇರಿ ನಮ್ಮದು ಅಂತ ಬಿಎಮ್ ಟಿಸಿ ಬಸ್ ನಿಲ್ದಾಣದಲ್ಲಿ ವಿನೂತನ ಮಾದರಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್

ಅರುಣ್​ ಕುಮಾರ್​ ಬೆಳ್ಳಿ

Updated on: Sep 02, 2023 | 7:38 PM

ಕಾವೇರಿ ನಮ್ಮದು, ಕಾವೇರಿ ನದಿ ನೀರಿಗಾಗಿ ಹೋರಾಟ, ಹಟಮಾರಿತನ ಪ್ರದರ್ಶಿಸುತ್ತಿರುವ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ ಅಂತ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು. ಪ್ರತಿಭಟನೆ ನಡೆಸಿದವರಲ್ಲಿ ಕೆಲ ಮಹಿಳೆಯರೂ ಇದ್ದರು. ಪೋಲಿಸರು ಬಂದು ವಾಟಾಳ್ ರ ಮನವೊಲಿಸಿ ಪಕ್ಕಕ್ಕೆ ಕರೆದೊಯ್ದರು.

ಬೆಂಗಳೂರು: ಕನ್ನಡ ಪರ ಹೋರಾಟಗಾರ ಮತ್ತು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ಪ್ರತಿಭಟನೆಗಳನ್ನು ವಿನೂತನವಾಗಿ ಮಾಡುವುದರಲ್ಲಿ ಸಿದ್ಧಹಸ್ತರು. ಇಂದು ಬಿಎಮ್ ಟಿಸಿ ಬಸ್ ನಿಲ್ದಾಣಕ್ಕೆ (BMTC bus stop) ತಮ್ಮ ಕಾರ್ಯಕರ್ತರೊಡನೆ ನುಗ್ಗಿ ಹೊರಡಲು ಅಣಿಯಾಗಿದ್ದ ಬಸ್ಸೊಂದರ ಮುಂದೆ ಪ್ರತಿಭಟನೆ ನಡೆಸಿದರು. ಕಾವೇರಿ ನದದಿ ನೀರನ್ನು (Cauvery River Water) ತಮಿಳುನಾಡು ಹರಿಬಿಟ್ಟಿದ್ದು ಮತ್ತು ನೀರಿನ ಬಗ್ಗೆ ತಮಿಳುನಾಡು ಹಟಮಾರಿ ಧೋರಣೆ ಪ್ರದರ್ಶಿಸುತ್ತಿರುವದನ್ನು ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು, ಕಾವೇರಿ ನದಿ ನೀರಿಗಾಗಿ ಹೋರಾಟ, ಹಟಮಾರಿತನ ಪ್ರದರ್ಶಿಸುತ್ತಿರುವ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ ಅಂತ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು. ಪ್ರತಿಭಟನೆ ನಡೆಸಿದವರಲ್ಲಿ ಕೆಲ ಮಹಿಳೆಯರೂ ಇದ್ದರು. ಪೋಲಿಸರು ಬಂದು ವಾಟಾಳ್ ರ ಮನವೊಲಿಸಿ ಪಕ್ಕಕ್ಕೆ ಕರೆದೊಯ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.