ಅಧಿಕಾರ ಹಂಚಿಕೆ ವಿಷಯ ನನಗಿಂತ ಜಾಸ್ತಿ ಮುನಿಯಪ್ಪನವರಿಗೆ ಗೊತ್ತಿರಬಹುದು: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 07, 2024 | 11:53 AM

ಸಚಿವ ಮುನಿಯಪ್ಪ ಮಾತಾಡಿದ್ದು ಸರಿಯೋ ತಪ್ಪೋ ಅನ್ನೋದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಚಾರ ಅಥವಾ ಕೆಪಿಸಿಸಿ ಅಧ್ಯಕ್ಷರು ಇಲ್ಲವೇ ಮುಖ್ಯಮಂತ್ರಿಯವರು ಅದರ ಕಡೆ ಗಮನ ಹರಿಸಬೇಕು, ತಮ್ಮ ಪಕ್ಷದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವೇ ಅಂತಿಮ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ಕೋಲಾರದಲ್ಲಿ ಮಾತಾಡುವಾಗ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಮತ್ತು ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿರೋದು ಸತ್ಯ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ತನಗೆ ಅದರ ಬಗ್ಗೆ ಗೊತ್ತಿಲ್ಲ, ಈ ವಿಷಯದಲ್ಲಿ ಮುನಿಯಪ್ಪನವರಿಗೆ ತನಗಿಂತ ಜಾಸ್ತಿ ಮಾಹಿತಿ ಇರಬಹುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ: ಡಿಕೆ ಒಪ್ಪಂದ ಹೇಳಿಕೆಗೆ ಪರಮೇಶ್ವರ್ ತೀವ್ರ ಅಸಮಾಧಾನ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.