ರನ್ಯಾ ರಾವ್ ಪ್ರಕರಣದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಮಂತ್ರಿಗಳು ಯಾಕೆ ಭಾಗಿಯಾಗಿರಬಾರದು? ಎಸ್​ಟಿ ಸೋಮಶೇಖರ್

Updated on: Mar 12, 2025 | 11:33 AM

ರನ್ಯಾ ರಾವ್ ಪ್ರಕರಣದಲ್ಲಿ ಇಬ್ಬರು ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸೋಮಶೇಖರ್, ಹಿಂದಿನ ಬಿಜೆಪಿ ಸರ್ಕಾರದ ಮಂತ್ರಿಗಳೇ ಯಾಕೆ ಶಾಮೀಲಾಗಿರಬಾರದು? ಮೊಬೈಲ್ ಸೀಜ್ ಮಾಡಿದ್ದಾರೆ, ತನಿಖೆ ಮಾಡಿಸಿದರೆ ನಿಜಾಂಶ ಹೊರ ಬಂದೇಬರುತ್ತದೆ ಎಂದು ಹೇಳಿದರು.

ಬೆಂಗಳೂರು, ಮಾರ್ಚ್ 12: ರನ್ಯಾ ರಾವ್ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao gold smuggling case) ಬಿಜೆಪಿ ಶಾಸಕರು ಊಹಾಪೋಹಗಳನ್ನು ಮಾಡೋದು ಬಿಟ್ಟು ಕೇಂದ್ರ ಸರ್ಕಾರದ ಜೊತೆ ಮಾತಾಡಿ ತನಿಖೆ ಮಾಡಿಸಲಿ, ಈಡಿ, ಸಿಬಿಐ ಮೊದಲಾದ ತನಿಖಾ ಏಜೆನ್ಸಿಗಳು ಕೇಂದ್ರದ ಅಧೀನದಲ್ಲಿವೆ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು. ಸದನದಲ್ಲಿ ಬಿಜೆಪಿ ಶಾಸಕರು ವಿಷಯವನ್ನು ಚರ್ಚೆ ಮಾಡಲಿ, ಆದರೆ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿರುವುದರಿಂದ ಅವರು ಕೇಂದ್ರ ಸರ್ಕಾರದ ಜೊತೆ ಮಾತಾಡೋದೇ ಲೇಸು ಎಂದು ಶಾಸಕ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಕರ್ನಾಟಕದ ಪ್ರಭಾವಿ ರಾಜಕಾರಣಿ ಹೆಸರು: ಯಾರವರು?

Published on: Mar 12, 2025 10:32 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More