‘ಚಿತ್ರರಂಗದಲ್ಲಿ ಯಶ್ ಮಾತ್ರ​ ರಾಜಾಹುಲಿ’ ಎಂದ ನಿರ್ಮಾಪಕ ಕೆ. ಮಂಜು

Updated on: May 29, 2023 | 8:07 AM

ನಿರ್ಮಾಪಕ ಕೆ.ಮಂಜು ಸಿನಿಮಾ ಟೈಟಲ್ ಬಗ್ಗೆ ಮಾತನಾಡಿದ್ದಾರೆ. ‘ರಾಜಕೀಯಕ್ಕೆ ಯಡಿಯೂರಪ್ಪ ರಾಜಾಹುಲಿ. ಸಿನಿಮಾಗೆ ಯಶ್ ಅವರೇ ರಾಜಾಹುಲಿ’ ಎಂದಿದ್ದಾರೆ.

ಯಶ್ ನಟನೆಯ ‘ರಾಜಾಹುಲಿ’ ಸಿನಿಮಾ (Rajahuli Movie) ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಹೊನ್ನರಾಜ್ ಹಾಗೂ ಶೃತಿ ಬಬಿತಾ ನಟಿಸಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ತಂಡ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿತು. ಸಿನಿಮಾ ಬಗ್ಗೆ ಇಡೀ ಚಿತ್ರತಂಡ ಮಾತನಾಡಿದೆ. ಈ ವೇಳೆ ನಿರ್ಮಾಪಕ ಕೆ.ಮಂಜು ಸಿನಿಮಾ ಟೈಟಲ್ ಬಗ್ಗೆ ಮಾತನಾಡಿದ್ದಾರೆ. ‘ರಾಜಕೀಯಕ್ಕೆ ಯಡಿಯೂರಪ್ಪ ರಾಜಾಹುಲಿ. ಸಿನಿಮಾಗೆ ಯಶ್ (Yash) ಅವರೇ ರಾಜಾಹುಲಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More