ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ?
ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು ಕರೆಸಿ ಈ ಸಿನಿಮಾ ಮಾಡಿಸಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿ ಈ ಸಿನಿಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಶ್ವೇತಾ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಇದು ಒಂದು ರೀತಿಯ ಪ್ರಯೋಗಾತ್ಮಕ ಸಿನಿಮಾ. ನಮ್ಮ ಎರಡನೇ ನಿರ್ಮಾಣದ ಸಿನಿಮಾ ಇದು. ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿರುವುದು ನಮ್ಮ ಹೆಗ್ಗಳಿಕೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.


