ಶಿವರಾಜ್ ಕುಮಾರ್, ರವಿಚಂದ್ರನ್ ಭೇಟಿಗೆ ತಯಾರಾದ ಎಂಎನ್ ಕುಮಾರ್: ಮುಂದೇನು?

Updated on: Jul 18, 2023 | 11:50 PM

MN Kumar: ಸುದೀಪ್ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬೆನ್ನಲ್ಲೆ ಫಿಲಂ ಚೇಂಬರ್ ಮುಂದೆ ಧರಣಿ ಕೂತಿದ್ದ ನಿರ್ಮಾಪಕ ಎಂಎನ್ ಕುಮಾರ್, ಇದೀಗ ಶಿವರಾಜ್ ಕುಮಾರ್ ಹಾಗೂ ರವಿಚಂದ್ರನ್ ಅವರನ್ನು ಭೇಟಿಯಾಗಲು ಮುಂದಾಗಿದ್ದಾರೆ.

ಸುದೀಪ್ (Sudeep)​ ವಿರುದ್ಧ ಅಡ್ವಾನ್ಸ್ ಮರಳಿಸಿಲ್ಲ ಎಂಬುದು ಸೇರಿದಂತೆ ಸರಣಿ ಆರೋಪ ಮಾಡಿದ್ದ ನಿರ್ಮಾಪಕ ಎಂಎನ್ ಕುಮಾರ್, ಸುದೀಪ್ ಅವರು 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಬೆನ್ನಲ್ಲೆ ವರಸೆ ಬದಲಿಸಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಶಿವರಾಜ್ ಕುಮಾರ್ ಹಾಗೂ ರವಿಚಂದ್ರನ್ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ತಾವು ಖುದ್ದಾಗಿ ರವಿಚಂದ್ರನ್ ಹಾಗೂ ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಲು ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More