ಫಿಲ್ಮ್​ ಚೇಂಬರ್ ಎದುರು ಪ್ರತಿಭಟನೆ ನಡೆಸಲಿದ್ದಾರೆ ನಿರ್ಮಾಪಕ ಎಂಎನ್ ​ಕುಮಾರ್

Updated on: Jul 17, 2023 | 9:22 AM

ರಾಜ್​​ಕುಮಾರ್ ಪ್ರತಿಮೆ‌ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ.  ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ.

ನಿರ್ಮಾಪಕ ಎಂಎನ್​ ಕುಮಾರ್ ಹಾಗೂ ಸುದೀಪ್ (Sudeep) ನಡುವಿನ ಜಟಾಪಟಿ ಮುಂದುವರಿದಿದೆ. ಕುಮಾರ್ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಇಂದು (ಜುಲೈ 17) ಫಿಲ್ಮ್​ ಚೇಂಬರ್​ನ ರಾಜ್​​ಕುಮಾರ್ ಪ್ರತಿಮೆ‌ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ.  ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈಗಾಗಲೇ ಎಂಎನ್​ ಕುಮಾರ್ (MN Kumar) ವಿರುದ್ಧ ಸುದೀಪ್​​ ಅಭಿಮಾನಿಗಳು ಈ ಮೊದಲು ಆಕ್ರೋಶ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More