AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?

ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?

ಮಂಜುನಾಥ ಸಿ.
|

Updated on:May 03, 2025 | 1:50 PM

Sonu Nigam controversy: ಕನ್ನಡತನವನ್ನು ಭಯೋತ್ಪಾದನೆಗೆ ಹೋಲಿಸಿದ ಸೋನು ನಿಗಂ ಅನ್ನು ಕನ್ನಡ ಚಿತ್ರರಂಗ ನಿಷೇಧಿಸಬೇಕು ಎಂಬ ಒತ್ತಾಯವನ್ನು ಕರವೇ ಸಂಘಟನೆಗಳು ಮಾಡಿವೆ. ಈ ಬಗ್ಗೆ ನಿರ್ಮಾಪಕದ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿದ್ದಾರೆ. ನಿಷೇಧ ಸಾಧ್ಯವಿಲ್ಲ ಆದರೆ ಅಸಹಕಾರ ತೋರಬಹುದಾಗಿದೆ. ಆ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದ್ದೇವೆ ಎಂದಿದ್ದಾರೆ. ಇಲ್ಲಿದೆ ವಿಡಿಯೋ...

ಈ ಹಿಂದೆ ಹಲವಾರು ಅದ್ಭುತ ಕನ್ನಡ ಹಾಡುಗಳನ್ನು ಹಾಡಿರುವ ಗಾಯಕ ಸೋನು ನಿಗಂ (Sonu Nigam) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡಿ ಎಂದು ಕೇಳಿದ್ದಕ್ಕೆ ಸಿಟ್ಟಾಗಿ ‘ಕನ್ನಡ, ಕನ್ನಡ ಇಂಥಹುದರಿಂದಲೇ ಪಹಲ್ಗಾಮ್ ದಾಳಿ ಆಗಿದ್ದು’ ಎನ್ನುವ ಮೂಲಕ ಕನ್ನಡತನವನ್ನು ಭಯೋತ್ಪಾಧನೆಗೆ ಹೋಲಿಸಿದ್ದಾರೆ. ಕನ್ನಡತನವನ್ನು ಭಯೋತ್ಪಾದನೆಗೆ ಹೋಲಿಸಿದ ಸೋನು ನಿಗಂ ನಿಷೇಧಕ್ಕೆ ಕರವೇ ಸಂಘಟನೆಗಳು ಒತ್ತಾಯಿಸಿದ್ದು, ಈ ಬಗ್ಗೆ ನಿರ್ಮಾಪಕದ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿದ್ದಾರೆ. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 03, 2025 01:34 PM