ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್
ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯುತ್ತಿದ್ದ ಪೀಠಾಧಿಪತ್ಯದ ವಿವಾದ ಮತ್ತು ಪದೇಪದೆ ಗಲಾಟೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದ ಗೇಟ್ ಬಂದ್ ಮಾಡಿ, ನಿಷೇಧಾಜ್ಞೆ ಬ್ಯಾನರ್ ಹಾಕಲಾಗಿದೆ. ಪೊಲೀಸರು ವಚನಾನಂದ ಸ್ವಾಮೀಜಿಗೂ ನೋಟಿಸ್ ನೀಡಿದ್ದಾರೆ. ಪರಿಸ್ಥಿತಿ ಶಾಂತಿಯುತವಾಗಿರುವವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತಿಯುತವಾಗುವವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 05, 2026 04:09 PM
Follow Us
