ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

Updated on: Dec 12, 2025 | 9:22 PM

ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು‌ ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು‌ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಂಡ್ಯ, (ಡಿಸೆಂಬರ್ 12): ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು‌ ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು‌ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Loading...
Unable to load recommendations.
Follow Us