ಮೈಸೂರು, ಆಗಸ್ಟ್ 30: ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರದ ಮೂಲಕ ರಾಜ್ಯದ ಪಾರ್ಕ್ಗಳ ಶೇ. 5ರಷ್ಟು ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಪಾರ್ಕ್ಗಳನ್ನು ಉಳಿಸುವಂತೆ ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಮೈಸೂರಿನಲ್ಲೂ ಪ್ರತಿಭಟನೆ ನಡೆದಿದ್ದು, ಪಡುವಾರಹಳ್ಳಿಯ ಚೆಲುವಾಂಬ ಪಾರ್ಕ್ನಲ್ಲಿ ಹೋರಾಟ ನಡೆಸಲಾಗಿದೆ. ಪಾರ್ಕ್ನ ಒಂದು ಇಂಚು ಜಾಗ ಕೂಡ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಯಲ್ಲಿ ಮೈಸೂರು ನಗರದ ನೂರಾರು ಸಾರ್ವಜನಿಕರು, ಬಿಜೆಪಿ ಶಾಸಕ ಶ್ರೀವತ್ಸ, ಎಂಎಲ್ಸಿ ರಘು ಕೌಟಿಲ್ಯ ಕೂಡ ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.