ಪಾರ್ಕ್​ಗಳ ಶೇ. 5ರಷ್ಟು ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ

ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾದ ಜೊತೆಗೆ ಉದ್ಯಾನವನಗಳ 5% ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆಗಳು ಆರಂಭವಾಗಿವೆ. ಮೈಸೂರಿನಲ್ಲೂ ಪಾರ್ಕ್​ಗಳನ್ನು ಉಳಿಸುವಂತೆ ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಹೋರಾಟ ನಡೆದಿದೆ.

ಮೈಸೂರು, ಆಗಸ್ಟ್​​ 30: ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರದ ಮೂಲಕ ರಾಜ್ಯದ ಪಾರ್ಕ್​ಗಳ ಶೇ. 5ರಷ್ಟು ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಪಾರ್ಕ್​ಗಳನ್ನು ಉಳಿಸುವಂತೆ ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಮೈಸೂರಿನಲ್ಲೂ ಪ್ರತಿಭಟನೆ ನಡೆದಿದ್ದು, ಪಡುವಾರಹಳ್ಳಿಯ ಚೆಲುವಾಂಬ ಪಾರ್ಕ್​ನಲ್ಲಿ ಹೋರಾಟ ನಡೆಸಲಾಗಿದೆ. ಪಾರ್ಕ್​ನ ಒಂದು ಇಂಚು ಜಾಗ ಕೂಡ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಯಲ್ಲಿ ಮೈಸೂರು ನಗರದ ನೂರಾರು ಸಾರ್ವಜನಿಕರು, ಬಿಜೆಪಿ ಶಾಸಕ ಶ್ರೀವತ್ಸ, ಎಂಎಲ್​​ಸಿ ರಘು ಕೌಟಿಲ್ಯ ಕೂಡ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us