AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಸೋರ್ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಅಶ್ರುವಾಯು, ಜಲಫಿರಂಗಿ ಪ್ರಯೋಗ

ಬಾಲಸೋರ್ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಅಶ್ರುವಾಯು, ಜಲಫಿರಂಗಿ ಪ್ರಯೋಗ

ಸುಷ್ಮಾ ಚಕ್ರೆ
|

Updated on:Jul 16, 2025 | 5:11 PM

Share

ಬಾಲಸೋರ್​​ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಖಂಡಿಸಿ ಒಡಿಶಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. ಬಾಲಸೋರ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಪ್ರತಿಭಟಿಸಿ ಬಿಜು ಜನತಾದಳ (ಬಿಜೆಡಿ) ಕೂಡ ಬಾಲಸೋರ್ ಬಂದ್ ಆಚರಿಸುತ್ತಿದೆ. ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಿಜೆಡಿ ಒತ್ತಾಯಿಸುತ್ತಿದೆ.

ಭುವನೇಶ್ವರ, ಜುಲೈ 16: ಒಡಿಶಾದ ಬಾಲಸೋರ್​​ನಲ್ಲಿ (Balasore Tragedy) ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಘಟನೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಇಂದು ಬೆಳಿಗ್ಗೆ ಒಡಿಶಾ ವಿಧಾನಸಭೆಯ ಹೊರಗೆ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಯಿತು. ವಿರೋಧ ಪಕ್ಷ ಬಿಜೆಡಿ ಈ ಘಟನೆ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಬಾಲಸೋರ್ ಜಿಲ್ಲೆಯಲ್ಲಿ 8 ಗಂಟೆಗಳ ಬಂದ್‌ಗೆ ಕರೆ ನೀಡಿದೆ. ನ್ಯಾಯ ದೊರಕಿಸಿಕೊಡಲು ಅವರು ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನಾರರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಜನಸಮೂಹವನ್ನು ಚದುರಿಸಲು ಜಲ ಫಿರಂಗಿಗಳನ್ನು ಬಳಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಕಾಲೇಜು ಪ್ರೊಫೆಸರ್ ವಿರುದ್ಧದ ಲೈಂಗಿಕ ಕಿರುಕುಳ ದೂರಿನ ಬಗ್ಗೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿಕೊಂಡ ಕಾಲೇಜು ವಿದ್ಯಾರ್ಥಿನಿಯ ಸಾವನ್ನು ಪ್ರತಿಭಟಿಸಿ ಕಾಂಗ್ರೆಸ್ ನೇತೃತ್ವದಲ್ಲಿ 8 ವಿರೋಧ ಪಕ್ಷಗಳು ಒಡಿಶಾ ಬಂದ್‌ಗೆ ಕರೆ ನೀಡಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Jul 16, 2025 05:10 PM