ನಟ ದರ್ಶನ್ ಗೆ ಸರ್ಜಿಕಲ್ ಚೇರ್ ಒದಗಿಸುವ ವಿಚಾರ ಜೈಲಧಿಕಾರಿಗಳ ಸುಪರ್ದಿಗೆ ಬಿಟ್ಟಿದ್ದು: ಪರಮೇಶ್ವರ್

Updated on: Sep 02, 2024 | 6:04 PM

ರೇಣುಕಾಸ್ವಾಮಿ ಕೊಲೆ ಪ್ರಕರದಲ್ಲಿ ಅರೋಪಿಯಾಗಿರುವ ದರ್ಶನ್ ಗೆ ಸ್ಪೈನಲ್ ಕಾರ್ಡ್ ಸಮಸ್ಯೆಯಿದೆ ಮತ್ತು ಮೊನ್ನೆ ಅವರು ಉತ್ತರ ವಲಯದ ಡಿಐಜಿ ಟಿಪಿ ಶೇಷ ಅವರಿಗೆ ವೆಸ್ಟರ್ನ್ ಟಾಯ್ಲೆಟ್ ಒದಗಿಸಬೇಕೆಂದು ಮನವಿ ಮಾಡಿದ್ದರು. ಅವರ ಮನವಿಯನ್ನು ಪರಶೀಲಿಸುವುದಾಗಿ ಅಧಿಕಾರಿ ಹೇಳಿದ್ದರು.

ತುಮಕೂರು: ಈ ಬಾರಿಯ ದಸರಾ ಉತ್ಸವವನ್ನು ತುಮಕೂರು ಜಿಲ್ಲಾಡಳಿತ ಸಹ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು ಅದರ ಪ್ರಯುಕ್ತ ಇಂದು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್, ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ಸರ್ಜಿಕಲ್ ಚೇರ್ ನೀಡುವ ವಿಚಾರ ಅಲ್ಲಿನ ಜೈಲು ಅಧಿಕಾರಿಗಳ ಸುಪರ್ದಿ ಬಿಟ್ಟಿದ್ದು, ವೈದ್ಯಕೀಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೈದಿಗಳ ಅಗತ್ಯ ಪೂರೈಸಲು ಜೈಲು ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ದೀಢೀರನೆ ಕೇಂದ್ರ ಕಾರಾಗೃಹ ಭೇಟಿ ನೀಡಿದ ಜಿ ಪರಮೇಶ್ವರ್ ಜೈಲು ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿದರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More